ಪ್ರಚಾರ ಮುಗಿಸಿ ಹೊರಟಿದ್ದ ಅಸಾದುದ್ದೀನ್ ಒವೈಸಿ ಕಾರಿನ ಮೇಲೆ ಗುಂಡಿನ ದಾಳಿ..!

suddionenews
1 Min Read

ದೆಹಲಿ-ಮೀರತ್ ಇವೇನಲ್ಲಿ ಛಜರ್ಸಿ ಟೋಲ್ ಬಳಿ ಒವೈಸಿ ಮುಖ್ಯಸ್ಥ ಅಸಾದುದ್ದೀನ್ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದೆ. ಉತ್ತರಪ್ರದೇಶದ ಮೀರತ್ ನಲ್ಲಿ ಚುನಾವಣಾ ಪ್ರಚಾರ ಮುಗಿಸಿ ಬರುವಾಗ ಈ ಘಟನೆ ನಡೆದಿದೆ.

ಘಟನೆ ನಡೆದ ಬಳಿಕ ಒಬ್ಬನನ್ನ ಬಂಧಿಸಲಾಗಿದೆ. ಇನ್ನು ಮೂರು ನಾಲ್ಕು ಸುತ್ತು ಗುಂಡಿನ ದಾಳಿ ನಡೆಸಲಾಗಿದೆ. ಆದ್ರೆ ಅದೃಷ್ಟವಶಾತ್ ಯಾವುದೇ ಪ್ರಾಣಾಯಾಮವಾಗಿಲ್ಲ. ಈ ಘಟನೆ ಬಳಿಕ ಎಲ್ಲರೂ ಸುರಕ್ಷಿತವಾಗಿರುವುದಾಗಿ ಒವೈಸಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಗುಂಡು ಹಾರಿಸಿದ ಪರಿಣಾಮ ನನ್ನ ಕಾರು ಪಂಕ್ಚರ್ ಆಗಿದೆ. ಹೀಗಾಗಿ ನಾನು ಬೇರೆ ವಾಹನದಲ್ಲಿ ತೆರಳಿದ್ದೆ. ಮೀರತ್ ನಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಟೋಲ್ ಬಳಿ ಇಬ್ಬರು ದುಷ್ಕರ್ಮಿಗಳು ನನ್ನ ವಾಹನದ ಮೇಲೆ 4 ಸುತ್ತು ಗುಂಡು ಹಾರಿಸಿದ್ದಾರೆ. ಇವರ ಜೊತೆ ಇನ್ನೂ 3-4 ಮಂದಿ ಇದ್ದರು ಎಂದು ಟ್ವೀಟ್ ಮಾಡಿದೆ.

Share This Article
Leave a Comment

Leave a Reply

Your email address will not be published. Required fields are marked *