Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಾಯುಮಾಲಿನ್ಯ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ : ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳಸಿಂಗ್

---Advertisement---

ಚಿತ್ರದುರ್ಗ. ನ.22: ವಾಯುಮಾಲಿನ್ಯದ ಪರಿಣಾಮ ಪರಿಸರ ಕಲುಷಿತವಾಗಿ ವಾತಾವರಣದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ಮಕ್ಕಳಿಗೆ ಅಪಾಯ ಉಂಟುಮಾಡಲಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ  ಭರತ್ ಎಂ.ಕಾಳಸಿಂಗ್ ತಿಳಿಸಿದರು.

ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಮಂಗಳವಾರ ಸಾರಿಗೆ ಇಲಾಖೆ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವತಿಯಿಂದ ಆಯೋಜಿಸಿದ್ದ ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಮ್ಮ ಶ್ವಾಸಕೋಶ ಸ್ವಚ್ಛವಾಗಿರಬೇಕಾದರೆ ಉತ್ತಮ ವಾತಾವರಣ, ಪರಿಸರ ಸ್ವಚ್ಛತೆ ತುಂಬಾ ಅಗತ್ಯ.ವಾಹನದಟ್ಟಣೆಯಿಂದಾಗಿ ಅನಾರೋಗ್ಯ ಸಮಸ್ಯೆ ಉಲ್ಬಣವಾಗಿ ಜನರ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.ಅದರಲ್ಲೂ ವಿಶೇಷವಾಗಿ ಮಕ್ಕಳ ಮೇಲೆ ತಕ್ಷಣ ಪ್ರಭಾವ ಉಂಟಾಗಿ ನೆಗಡಿ, ಕೆಮ್ಮಿನಂತ ಕಾಯಿಲೆ ಪದೇ ಪದೇ  ಪುನರಾವರ್ತಿತವಾಗುತ್ತಿರುತ್ತದೆ ಎಂದರು.

ಇಂದಿನ ದಿನಮಾನದಲ್ಲಿ ನಮ್ಮ ಗಮನ ವಾಯುಮಾಲಿನ್ಯ ತಡೆಗಟ್ಟುವ ಕಡೆ ಗಮನಹರಿಸಬೇಕಿದೆ. ನಮ್ಮ ಸುತ್ತಲಿನ ಪರಿಸರ ಸಂಪೂರ್ಣ ಗಿಡಮರಗಳಿಂದ ಕೂಡಿದ್ದರೆ ಮಾತ್ರ ವಾಯುಮಾಲಿನ್ಯದ ಅಡ್ಡ ಪರಿಣಾಮ ತಡೆಯಲು ಸಾಧ್ಯ ಎಂದು ತಿಳಿಸಿದ ಅವರು, ರಸ್ತೆ ಸುರಕ್ಷತೆ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಸಾರಿಗೆ ಇಲಾಖೆ ಕಚೇರಿ ಅಧೀಕ್ಷಕ ಹೇಮಂತ್ ಕುಮಾರ್ ಮಾತನಾಡಿ, ಪ್ರತಿ ವರ್ಷ ನವೆಂಬರ್ ಮಾಹೆಯಲ್ಲಿ ಸಾರಿಗೆ ಇಲಾಖೆ ವತಿಯಿಂದ ವಾಯುಮಾಲಿನ್ಯ ಮಾಸಾಚರಣೆ ಹಮ್ಮಿಕೊಂಡು, ವಾಹನಗಳಿಂದ ಆಗುವ ಮಾಲಿನ್ಯ ಕಡಿಮೆಗೊಳಿಸುವ ಸಲುವಾಗಿ ವಾಯುಮಾಲಿನ್ಯ ಮಾಸಾಚರಣೆ ಮೂಲಕ ಅರಿವು ಮೂಡಿಸಲಾಗುತ್ತದೆ ಎಂದರು.

ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ  ಸಾರ್ವಜನಿಕರು ವೈಯಕ್ತಿಕ ವಾಹನ ಕಡಿಮೆ ಮಾಡಿ, ಸಮೂಹ ಸಾರಿಗೆ ಬಳಸಬೇಕು, ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ವಾಹನ ಬಳಸಿ, ಪರಿಸರ ಸಂರಕ್ಷಿಸಬೇಕು. ಎಲೆಕ್ಟ್ರಾನಿಕ್ ವಾಹನ ಬಳಕೆಯಿಂದ ಶಬ್ಧ ಮಾಲಿನ್ಯ, ವಾಯುಮಾಲಿನ್ಯದಿಂದ ದೂರವಿರಬಹುದು. ವಾಹನದ ತೆರೆಯಲ್ಲಿ ಉಳಿತಾಯವಾಗಲಿದೆ. ಪೆಟ್ರೋಲ್ ಬಂಕ್‍ನಲ್ಲಿ ಸರದಿ ಸಾಲಿನಲ್ಲಿ ನಿಲ್ಲುವುದು ತಪ್ಪುತ್ತದೆ. ಸಂಚಾರವೂ ಸುರಕ್ಷಿತವಾಗಿರಲಿದೆ. ಸಾಧ್ಯವಾದಷ್ಟು ಎಲೆಕ್ಟ್ರಿಕಲ್ ವಾಹನ ಬಳಕೆ ಮಾಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಮೋಟಾರು ವಾಹನಗಳ ನಿರೀಕ್ಷಕ ಟಿ.ಎಂ.ಪ್ರಕಾಶ್, ಪರಿಸರ ಅಧಿಕಾರಿ ಈ. ಪ್ರಕಾಶ್, ಸರ್ಕಾರಿ ಪಾಲಿಟೆಕ್ನಿಕ್‍ನ ಎಂ.ಸುಧಾ, ನಾಗೇಶ್, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕೆ.ಜಗದೀಶ್ ಉಪನ್ಯಾಸಕಿ ಸೌಮ್ಯ ಸೇರಿದಂತೆ ಸರ್ಕಾರಿ ಪಾಲಿಟೆಕ್ನಿಕ್ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment