ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ ವಿಮೆಯನ್ನು ಪುನಃ ಪರಿಶೀಲಿಸಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ಪಾವತಿಸಿ ಬರ ಪರಿಹಾರ ತುರ್ತಾಗಿ ನೀಡಬೇಕೆಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳು ತಾರತಮ್ಯವೆಸಗಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಇನ್ಸುರೆನ್ಸ್ ಹಣವನ್ನು ಪಿ.ಎಂ.ಕಿಸಾನ್, ಎಸ್.ಎಸ್.ವೈ. ಹಣವನ್ನು ಬ್ಯಾಂಕ್ ಸಾಲಕ್ಕೆ ಜಮ ಮಾಡಿರುವುದನ್ನು ರದ್ದುಪಡಿಸಿ ರೈತರಿಗೆ ಹಣ ಪಾವತಿ ಮಾಡಬೇಕು. ಸೂರನಹಳ್ಳಿ ಮಾರ್ಗದಿಂದ ಮರಿಕುಂಟೆ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸುವಂತೆ ಚಳುವಳಿ ನಡೆಸಿದ್ದರೂ ಇದುವರೆವಿಗೂ ಬಸ್ ವ್ಯವಸ್ಥೆಯಿಲ್ಲ.
ಪರಶುರಾಂಪುರ ಹೋಬಳಿ ಚೌಳೂರು ಗ್ರಾಮದ ರಿ.ಸ.ನಂ. 152 ರಲ್ಲಿ 1989-90 ನೇ ಸಾಲಿನಲ್ಲಿ ಸಾಗುವಳಿ ನೀಡಿದ್ದು, ಇದುವರೆವಿಗೂ ದುರಸ್ತಿ ಕಾಣದೆ ಹದ್ದುಬಸ್ತ್ ಆಗಿರುವುದಿಲ್ಲ. ಬಿತ್ತನೆ ಸಮಯದಲ್ಲಿ ಹಲವು ರೈತರು ಗಲಾಟೆ ಮಾಡಿಕೊಂಡು ಕೋರ್ಟ್ಗೆ ಅಲೆದಾಡುತ್ತಿದ್ದಾರೆ. ತುರ್ತಾಗಿ ದುರಸ್ಥಿಗೊಳಿಸುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.
ರೈತ ಮುಖಂಡರುಗಳಾದ ಚಿಕ್ಕಣ್ಣ, ಜಂಪಣ್ಣ, ಖಾದರ್ಭಾಷ, ನವೀನ್ಗೌಡ, ರುದ್ರಣ್ಣ, ಜಯಮ್ಮ, ತಿಮ್ಮಣ್ಣ, ಎಂ.ಲಕ್ಷ್ಮಿದೇವಿ, ಪರಮೇಶ್ವರಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್