Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ ವಿಮೆಯನ್ನು ಪುನಃ ಪರಿಶೀಲಿಸಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ಪಾವತಿಸಿ ಬರ ಪರಿಹಾರ ತುರ್ತಾಗಿ ನೀಡಬೇಕೆಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳು ತಾರತಮ್ಯವೆಸಗಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.  ಬ್ಯಾಂಕ್ ಅಧಿಕಾರಿಗಳು ಇನ್ಸುರೆನ್ಸ್ ಹಣವನ್ನು ಪಿ.ಎಂ.ಕಿಸಾನ್, ಎಸ್.ಎಸ್.ವೈ. ಹಣವನ್ನು ಬ್ಯಾಂಕ್ ಸಾಲಕ್ಕೆ ಜಮ ಮಾಡಿರುವುದನ್ನು ರದ್ದುಪಡಿಸಿ ರೈತರಿಗೆ ಹಣ ಪಾವತಿ ಮಾಡಬೇಕು. ಸೂರನಹಳ್ಳಿ ಮಾರ್ಗದಿಂದ ಮರಿಕುಂಟೆ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸುವಂತೆ ಚಳುವಳಿ ನಡೆಸಿದ್ದರೂ ಇದುವರೆವಿಗೂ ಬಸ್ ವ್ಯವಸ್ಥೆಯಿಲ್ಲ.

ಪರಶುರಾಂಪುರ ಹೋಬಳಿ ಚೌಳೂರು ಗ್ರಾಮದ ರಿ.ಸ.ನಂ. 152 ರಲ್ಲಿ 1989-90 ನೇ ಸಾಲಿನಲ್ಲಿ ಸಾಗುವಳಿ ನೀಡಿದ್ದು, ಇದುವರೆವಿಗೂ ದುರಸ್ತಿ ಕಾಣದೆ ಹದ್ದುಬಸ್ತ್ ಆಗಿರುವುದಿಲ್ಲ. ಬಿತ್ತನೆ ಸಮಯದಲ್ಲಿ ಹಲವು ರೈತರು ಗಲಾಟೆ ಮಾಡಿಕೊಂಡು ಕೋರ್ಟ್‍ಗೆ ಅಲೆದಾಡುತ್ತಿದ್ದಾರೆ. ತುರ್ತಾಗಿ ದುರಸ್ಥಿಗೊಳಿಸುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ರೈತ ಮುಖಂಡರುಗಳಾದ ಚಿಕ್ಕಣ್ಣ, ಜಂಪಣ್ಣ, ಖಾದರ್‍ಭಾಷ, ನವೀನ್‍ಗೌಡ, ರುದ್ರಣ್ಣ, ಜಯಮ್ಮ, ತಿಮ್ಮಣ್ಣ, ಎಂ.ಲಕ್ಷ್ಮಿದೇವಿ, ಪರಮೇಶ್ವರಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!