ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ ವಿಮೆಯನ್ನು ಪುನಃ ಪರಿಶೀಲಿಸಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ಪಾವತಿಸಿ ಬರ ಪರಿಹಾರ ತುರ್ತಾಗಿ ನೀಡಬೇಕೆಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳು ತಾರತಮ್ಯವೆಸಗಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಇನ್ಸುರೆನ್ಸ್ ಹಣವನ್ನು ಪಿ.ಎಂ.ಕಿಸಾನ್, ಎಸ್.ಎಸ್.ವೈ. ಹಣವನ್ನು ಬ್ಯಾಂಕ್ ಸಾಲಕ್ಕೆ ಜಮ ಮಾಡಿರುವುದನ್ನು ರದ್ದುಪಡಿಸಿ ರೈತರಿಗೆ ಹಣ ಪಾವತಿ ಮಾಡಬೇಕು. ಸೂರನಹಳ್ಳಿ ಮಾರ್ಗದಿಂದ ಮರಿಕುಂಟೆ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸುವಂತೆ ಚಳುವಳಿ ನಡೆಸಿದ್ದರೂ ಇದುವರೆವಿಗೂ ಬಸ್ ವ್ಯವಸ್ಥೆಯಿಲ್ಲ.
ಪರಶುರಾಂಪುರ ಹೋಬಳಿ ಚೌಳೂರು ಗ್ರಾಮದ ರಿ.ಸ.ನಂ. 152 ರಲ್ಲಿ 1989-90 ನೇ ಸಾಲಿನಲ್ಲಿ ಸಾಗುವಳಿ ನೀಡಿದ್ದು, ಇದುವರೆವಿಗೂ ದುರಸ್ತಿ ಕಾಣದೆ ಹದ್ದುಬಸ್ತ್ ಆಗಿರುವುದಿಲ್ಲ. ಬಿತ್ತನೆ ಸಮಯದಲ್ಲಿ ಹಲವು ರೈತರು ಗಲಾಟೆ ಮಾಡಿಕೊಂಡು ಕೋರ್ಟ್ಗೆ ಅಲೆದಾಡುತ್ತಿದ್ದಾರೆ. ತುರ್ತಾಗಿ ದುರಸ್ಥಿಗೊಳಿಸುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.
ರೈತ ಮುಖಂಡರುಗಳಾದ ಚಿಕ್ಕಣ್ಣ, ಜಂಪಣ್ಣ, ಖಾದರ್ಭಾಷ, ನವೀನ್ಗೌಡ, ರುದ್ರಣ್ಣ, ಜಯಮ್ಮ, ತಿಮ್ಮಣ್ಣ, ಎಂ.ಲಕ್ಷ್ಮಿದೇವಿ, ಪರಮೇಶ್ವರಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 25 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಮಂಗಳವಾರ, ಫೆಬ್ರವರಿ. 25 ) ಹತ್ತಿ…
ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…
ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…