ರೈತರಿಗೆ ಬೆಳೆ ವಿಮೆ ಮತ್ತು ಬರ ಪರಿಹಾರ ವಿಮೆ ಹಣ ತುರ್ತಾಗಿ ನೀಡುವಂತೆ ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಒತ್ತಾಯ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 06 : ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ, ಸೋಮಗುದ್ದು ಗ್ರಾಮ ಪಂಚಾಯಿತಿಗಳಿಗೆ ಸೇರಿದ ಹಳ್ಳಿಗಳ ಬೆಳೆ ವಿಮೆಯನ್ನು ಪುನಃ ಪರಿಶೀಲಿಸಿ ಎಲ್ಲಾ ರೈತರ ಬ್ಯಾಂಕ್ ಖಾತೆಗಳಿಗೆ ವಿಮೆ ಹಣ ಪಾವತಿಸಿ ಬರ ಪರಿಹಾರ ತುರ್ತಾಗಿ ನೀಡಬೇಕೆಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ಚಳ್ಳಕೆರೆ ತಾಲ್ಲೂಕು ಶಾಖೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.

ಬೆಳೆ ಸಮೀಕ್ಷೆಯಲ್ಲಿ ಅಧಿಕಾರಿಗಳು ತಾರತಮ್ಯವೆಸಗಿರುವುದರಿಂದ ರೈತರು ತೊಂದರೆ ಅನುಭವಿಸುತ್ತಿದ್ದಾರೆ.  ಬ್ಯಾಂಕ್ ಅಧಿಕಾರಿಗಳು ಇನ್ಸುರೆನ್ಸ್ ಹಣವನ್ನು ಪಿ.ಎಂ.ಕಿಸಾನ್, ಎಸ್.ಎಸ್.ವೈ. ಹಣವನ್ನು ಬ್ಯಾಂಕ್ ಸಾಲಕ್ಕೆ ಜಮ ಮಾಡಿರುವುದನ್ನು ರದ್ದುಪಡಿಸಿ ರೈತರಿಗೆ ಹಣ ಪಾವತಿ ಮಾಡಬೇಕು. ಸೂರನಹಳ್ಳಿ ಮಾರ್ಗದಿಂದ ಮರಿಕುಂಟೆ ಮಾರ್ಗವಾಗಿ ಸರ್ಕಾರಿ ಬಸ್ ಸಂಚಾರ ಆರಂಭಿಸುವಂತೆ ಚಳುವಳಿ ನಡೆಸಿದ್ದರೂ ಇದುವರೆವಿಗೂ ಬಸ್ ವ್ಯವಸ್ಥೆಯಿಲ್ಲ.

ಪರಶುರಾಂಪುರ ಹೋಬಳಿ ಚೌಳೂರು ಗ್ರಾಮದ ರಿ.ಸ.ನಂ. 152 ರಲ್ಲಿ 1989-90 ನೇ ಸಾಲಿನಲ್ಲಿ ಸಾಗುವಳಿ ನೀಡಿದ್ದು, ಇದುವರೆವಿಗೂ ದುರಸ್ತಿ ಕಾಣದೆ ಹದ್ದುಬಸ್ತ್ ಆಗಿರುವುದಿಲ್ಲ. ಬಿತ್ತನೆ ಸಮಯದಲ್ಲಿ ಹಲವು ರೈತರು ಗಲಾಟೆ ಮಾಡಿಕೊಂಡು ಕೋರ್ಟ್‍ಗೆ ಅಲೆದಾಡುತ್ತಿದ್ದಾರೆ. ತುರ್ತಾಗಿ ದುರಸ್ಥಿಗೊಳಿಸುವಂತೆ ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.

ರೈತ ಮುಖಂಡರುಗಳಾದ ಚಿಕ್ಕಣ್ಣ, ಜಂಪಣ್ಣ, ಖಾದರ್‍ಭಾಷ, ನವೀನ್‍ಗೌಡ, ರುದ್ರಣ್ಣ, ಜಯಮ್ಮ, ತಿಮ್ಮಣ್ಣ, ಎಂ.ಲಕ್ಷ್ಮಿದೇವಿ, ಪರಮೇಶ್ವರಪ್ಪ, ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಇನ್ನು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

Recent Posts

ಮೂತ್ರಪಿಂಡದ ಕಲ್ಲಿನ ಸಮಸ್ಯೆ ಇರುವವರು ಆಹಾರಗಳನ್ನು ಅಪ್ಪಿತಪ್ಪಿಯೂ ತಿನ್ನಬಾರದು…!

ಸುದ್ದಿಒನ್ :ಭಾರತದಲ್ಲಿ ಮೂತ್ರಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಹೆಚ್ಚುತ್ತಿದೆ. ಹೆಚ್ಚಿನ ಸಂಖ್ಯೆಯ ಜನರು ಇದಕ್ಕೆ ಬಲಿಯಾಗುತ್ತಿದ್ದಾರೆ. ಮೂತ್ರಪಿಂಡಗಳು ನಮ್ಮ ದೇಹದಲ್ಲಿ ಬಹಳ…

3 hours ago

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು

ಅಂತೂ ಇಂತೂ ಈ ರಾಶಿಯವರದು ಮದುವೆಯಾಯಿತು, ಈ ರಾಶಿಯವರಿಗೆ ಉದ್ಯೋಗದ ವರ್ಗಾವಣೆಯಿಂದ ಸಂತಸ, ಮಂಗಳವಾರದ ರಾಶಿ ಭವಿಷ್ಯ 25 ಫೆಬ್ರವರಿ…

5 hours ago

ಉದ್ಯೋಗ ವಾರ್ತೆ : ಚಿತ್ರದುರ್ಗದಲ್ಲಿ ಮಾರ್ಚ್ 01 ರಂದು ಬೃಹತ್ ಉದ್ಯೋಗ ಮೇಳ

ಚಿತ್ರದುರ್ಗ. ಫೆ.24:  ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…

15 hours ago

ಮಧ್ಯ ಕರ್ನಾಟಕದಲ್ಲಿಯೇ ಪ್ರಪ್ರಥಮ ENT ಲೇಸರ್ ಶಸ್ತ್ರಚಿಕಿತ್ಸಾ ಯಂತ್ರ ಲೋಕಾರ್ಪಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

16 hours ago

ಭದ್ರಾ ಮೇಲ್ದಂಡೆಗೆ ರಾಜ್ಯ ಬಜೆಟ್ ನಲ್ಲಿ ಐದು ಸಾವಿರ ಕೋಟಿ ಅನುದಾನಕ್ಕೆ ಹಕ್ಕೊತ್ತಾಯ

ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…

16 hours ago