Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಟಿಕೆಟ್ ಸಿಗದೆ ಇದ್ದರೆ ಬಂಡಾಯವೇಳುತ್ತಾರಾ ಅಖಂಡ ಶ್ರೀನಿವಾಸ ಮೂರ್ತಿ..!

Facebook
Twitter
Telegram
WhatsApp

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಖಾಡ ರೆಡಿಯಾಗಿದೆ. ಮೂರು ಪಕ್ಷಗಳಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಕೆಲ ಆಕಾಂಕ್ಷಿಗಳು ಈಗಾಗಲೇ ಬಂಡಾಯವೆದ್ದಿದ್ದಾರೆ. ಬಂಡಾಯ ಶಮನ ಮಾಡುವ ಕೆಲಸವನ್ನು ಪಕ್ಷಗಳು ಮಾಡುತ್ತಿವೆಯಾದರೂ, ಪ್ರಭಾವಿ ಅಭ್ಯರ್ಥಿಗಳಿಂದ ಹೊಡೆತ ಬೀಳುವ ಸಾಧ್ಯತೆ ಇದೆ. ಇದೀಗ ಕಾಂಗ್ರೆಸ್ ಹಾಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಕೂಡ ಬಂಡಾಯವೇಳುವ ಎಲ್ಲಾ ಸಾಧ್ಯತೆ ಇದೆ.

ಈ ಬಾರಿಯ ಚುನಾವಣೆಗೆ ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್ ಸಿಗೋದು ಅನುಮಾನ ಎನ್ನಲಾಗುತ್ತಿದೆ. ಟಿಕೆಟ್ ಸಿಗದೆ ಇದ್ದರೆ ಬಂಡಾಯವೇಳುವುದು ಖಚಿತ ಎಂದು ಆಪ್ತ ಮೂಲಗಳಿಂದ ವಿಚಾರ ಹೊರ ಬಿದ್ದಿದೆ. ಯಾಕಂದ್ರೆ ಪುಲಿಕೇಶಿ ನಗರದಲ್ಲಿ ಪ್ರಬಲ ಅಭ್ಯರ್ಥಿಯಾಗಿ ಬೆಳೆದಿದ್ದಾರೆ ಅಖಂಡ ಶ್ರೀನಿವಾಸ್ ಮೂರ್ತಿ. ಕಳೆದ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ, ಬಹುಮತದಿಂದ ಗೆಲುವು ಕಂಡಿದ್ದರು.

ಅಖಂಡ ಶ್ರೀನಿವಾಸ್ ಮೂರ್ತಿಗೆ ಸಿದ್ದರಾಮಯ್ಯ ಹಾಗೂ ಜಮೀರ್ ಅಹ್ಮದ್ ಕೂಡ ಬೆಂಬಲ ಸೂಚಿಸಿದ್ದಾರೆ. ಟೊಕೆಟ್ ನೀಡಲು ಒತ್ತಾಯ ಕೇಳಿ ಬಂದಿದೆ. ಆದರೂ 124ರ ಪಟ್ಟಿಯಲ್ಲಿ ಹೆಸರು ಬಂದಿಲ್ಲ. ಟಿಕೆಟ್ ಸಿಗದೆ ಹೋದರೆ ಮುಂದೆ ಬಿಜೆಪಿ ಪಕ್ಷ‌ ಸೇರುವುದು ಅಥವಾ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆಯೂ ಆಪ್ತರ ಬಳಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!