Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

 

ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಅಕ್ಷಯ್ ಕುಮಾರ್, ನನ್ನ ಭಾರತ ವಿಕಸಿತ ಮತ್ತು ಅಭಿವೃದ್ಧಿಯತ್ತ ಸಾಗುತ್ತಿರಬೇಕು. ಇದೇ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಾನು ಇವತ್ತು ಮತ ಚಲಾಯಿಸಿದ್ದೇನೆ. ಭಾರತದ ಜನರು ತಮ್ಮ ಸ್ವವಿವೇಚನೆಯಿಂದ ಆಲೋಚಿಸಿ ಮತ ಹಾಕಬೇಕು. ಈ ಬಾರಿ ಹೆಚ್ಚು ಮತದಾನ ಆಗಲಿದೆ. ಇಂದು ಏಳು ಗಂಟೆಗೇನೆ ಅಪಾರ ಸಂಖ್ಯೆಯಲ್ಲಿ ಜನ ಮತಗಟ್ಟೆಗೆ ಬಂದಿದ್ದರು. ಈಗಲೂ 200-300 ಜನ ಮತಗಟ್ಟೆಯಲ್ಲಿ ನಿಂತಿದ್ದಾರೆ. ಭಾರತವೇ ನನಗೆ ಸರ್ವಸ್ವ. ನನ್ನ ಹೃದಯ ಮತ್ತು ಪೌರತ್ವ ಎಲ್ಲವೂ ಹಿಂದೂಸ್ತಾನವೇ ಆಗಿದೆ. ನಾನು ಗಳಿಸಿದ್ದು ಎಲ್ಲವೂ ಇಲ್ಲಿಂದಾನೇ. ಮತ್ತೆ ಭಾರತದ ಪೌರತ್ವ ಹಿಂಪಡೆಯುತ್ತಿರುವುದಕ್ಕೆ ಖುಷಿ ಇದೆ. ಕೆಲವೊಮ್ಮೆ ಜನರು ಯಾವ ವಿಷಯವನ್ನು ತಿಳಿದುಕೊಳ್ಳದೆ ಮಾತನಾಡಿದಾಗ ಬೇಸರವಾಗುತ್ತದೆ ಎಂದಿದ್ದಾರೆ. ಇನ್ನು ಜನರಿಗೆ ಮತದಾನದ ಜಾಗೃತಿಯನ್ನು ಮೂಡಿಸಿದ್ದು, ತಪ್ಪದೇ ಮತದಾನ ಮಾಡಿ ಎಂದು ಕಿವಿ ಮಾತು ಹೇಳಿದ್ದಾರೆ.

ಅಕ್ಷಯ್ ಕುಮಾರ್ 1990 ರಲ್ಲಿ ಕೆನಡಾದ ಪೌರತ್ವಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ನಂತರ 2019 ರಲ್ಲಿ ಮತ್ತೆ ಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಕೆ ಮಾಡಿದರು‌. ಇಲ್ಲಿನ ನಾಗರೀಕತ್ವವನ್ನು ಪಡೆದುಕೊಂಡರು. ಅಂದು ಪೌರತ್ವ ಪಡೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಭಾರತದ ಪೌರತ್ವ ಪಡೆದಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!