Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್ ಕುಮಾರ್ : ಭಾರತದ ಪೌರತ್ವದ ಬಗ್ಗೆ ಹೇಳಿದ್ದೇನು..?

---Advertisement---

 

ದೇಶದೆಲ್ಲೆಡೆ ಲೋಕಸಭಾ ಚುನಾವಣೆಯ ರಂಗು ಜೋರಾಗಿದೆ. ಇಂದು ಕೂಡ ಮತದಾನ ನಡೆಯುತ್ತಿದ್ದು, ಮಹಾರಾಷ್ಟ್ರದಲ್ಲಿ ಐದನೇ ಹಂತದ ಮತದಾನ ನಡೆಯುತ್ತಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಭಾರತದ ಪೌರತ್ವ ಪಡೆದು ಮೊದಲ ಬಾರಿಗೆ ಮತ ಚಲಾಯಿಸಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಅಕ್ಷಯ್ ಕುಮಾರ್, ನನ್ನ ಭಾರತ ವಿಕಸಿತ ಮತ್ತು ಅಭಿವೃದ್ಧಿಯತ್ತ ಸಾಗುತ್ತಿರಬೇಕು. ಇದೇ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ನಾನು ಇವತ್ತು ಮತ ಚಲಾಯಿಸಿದ್ದೇನೆ. ಭಾರತದ ಜನರು ತಮ್ಮ ಸ್ವವಿವೇಚನೆಯಿಂದ ಆಲೋಚಿಸಿ ಮತ ಹಾಕಬೇಕು. ಈ ಬಾರಿ ಹೆಚ್ಚು ಮತದಾನ ಆಗಲಿದೆ. ಇಂದು ಏಳು ಗಂಟೆಗೇನೆ ಅಪಾರ ಸಂಖ್ಯೆಯಲ್ಲಿ ಜನ ಮತಗಟ್ಟೆಗೆ ಬಂದಿದ್ದರು. ಈಗಲೂ 200-300 ಜನ ಮತಗಟ್ಟೆಯಲ್ಲಿ ನಿಂತಿದ್ದಾರೆ. ಭಾರತವೇ ನನಗೆ ಸರ್ವಸ್ವ. ನನ್ನ ಹೃದಯ ಮತ್ತು ಪೌರತ್ವ ಎಲ್ಲವೂ ಹಿಂದೂಸ್ತಾನವೇ ಆಗಿದೆ. ನಾನು ಗಳಿಸಿದ್ದು ಎಲ್ಲವೂ ಇಲ್ಲಿಂದಾನೇ. ಮತ್ತೆ ಭಾರತದ ಪೌರತ್ವ ಹಿಂಪಡೆಯುತ್ತಿರುವುದಕ್ಕೆ ಖುಷಿ ಇದೆ. ಕೆಲವೊಮ್ಮೆ ಜನರು ಯಾವ ವಿಷಯವನ್ನು ತಿಳಿದುಕೊಳ್ಳದೆ ಮಾತನಾಡಿದಾಗ ಬೇಸರವಾಗುತ್ತದೆ ಎಂದಿದ್ದಾರೆ. ಇನ್ನು ಜನರಿಗೆ ಮತದಾನದ ಜಾಗೃತಿಯನ್ನು ಮೂಡಿಸಿದ್ದು, ತಪ್ಪದೇ ಮತದಾನ ಮಾಡಿ ಎಂದು ಕಿವಿ ಮಾತು ಹೇಳಿದ್ದಾರೆ.

ಅಕ್ಷಯ್ ಕುಮಾರ್ 1990 ರಲ್ಲಿ ಕೆನಡಾದ ಪೌರತ್ವಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದರು. ನಂತರ 2019 ರಲ್ಲಿ ಮತ್ತೆ ಭಾರತದ ಪೌರತ್ವಕ್ಕೆ ಅರ್ಜಿ ಸಲ್ಲಿಕೆ ಮಾಡಿದರು‌. ಇಲ್ಲಿನ ನಾಗರೀಕತ್ವವನ್ನು ಪಡೆದುಕೊಂಡರು. ಅಂದು ಪೌರತ್ವ ಪಡೆದುಕೊಂಡ ಬಳಿಕ ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಭಾರತದ ಪೌರತ್ವ ಪಡೆದಿರುವುದಕ್ಕೆ ಖುಷಿ ವ್ಯಕ್ತಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment