Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

3 ದೇಶದಲ್ಲಿ ರೂಪಾಂತರಿ ಕೊರೋನಾ ಹೆಚ್ಚಳ : ಕೇಂದ್ರ ಸರ್ಕಾರ ಅಲರ್ಟ್..!

Facebook
Twitter
Telegram
WhatsApp

ನವದೆಹಲಿ: ಕೊರೊನಾ ಮೂರನೆಯ ಅಲೆಯ ಭಯವಿಲ್ಲ ಎಂಬ ಧೈರ್ಯ ಎಲ್ಲರಲ್ಲೂ ಇತ್ತು. ಕೊರೊನಾದಿಂದ ಬಚಾವ್ ಆಗಿದ್ದೇವೆ, ಇನ್ನು ಮಾಮೂಲಿ ಜೀವನ ಮಾಡಬಹುದು ಎಂದೇ ಎಲ್ಲರೂ ಭಾವಿಸಿದ್ದಾರೆ. ಮಾಮೂಲಿ ಜೀವನ ಮಾಡಬಹುದು. ಆದರೆ ಕೊರೊನಾ ಬಗ್ಗೆ ಜಾಗೃತಿ ವಹಿಸಿದರೆ ಮಾತ್ರ. ಯಾಕಂದ್ರೆ ಬೇರೆ ದೇಶಗಳಲ್ಲಿ ಕೊರೊನಾ ಮತ್ತೆ ಅಟ್ಟಹಾಸ ಮೆರೆಯುತ್ತಿದೆ. ಇಷ್ಟು ದಿನ ಮಾಸ್ಕ್ ಹಾಕದೆ, ಸಾಮಾಜಿಕ ಅಂತರವೂ ಇಲ್ಲದೆ ಎಲ್ಲರೂ ಮೈಮರೆತು ಬದುಕುತ್ತಿದ್ದಾರೆ. ಇದು ಕೊರೊನಾ ಹರಡಲು ಸುಲಭ ಮಾರ್ಗ ತೋರಿಸಿದಂತಾಗುತ್ತಿದೆ.

ಸೌತ್ ಆಫ್ರಿಕಾ, ಹಾಂಗ್ ಕಾಂಗ್, ಬೋಟ್ಸಾನಾ ದೇಶಗಳಲ್ಲಿ ಕೊರೊನಾ ಇದ್ದಕ್ಕಿದ್ದ ಹಾಗೆ ಹೆಚ್ಚಳವಾಗಿದೆ. ಅದರಲ್ಲೂ ಹೊಸ ತಳಿ ಹುಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಯಾವಾಗ ಅಲ್ಲಿ ರೂಪಾಂತರಿ ಕೊರೊನಾ ಹೆಚ್ಚಳವಾಯ್ತೋ ಇತ್ತ ಭಾರತದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ, ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ. ಇನ್ನು ಇಲಾಖೆಯ ಕಾರ್ಯದರ್ಶಿ ರಾಜೇಶ್ ಭೂಷಣ್ ಈ ಸಂಬಂಧ ಪತ್ರ ಬರೆದಿದ್ದು, ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರೂಪಾಂತರಿ ವೈರಸ್ ಬಗ್ಗೆ ಎಚ್ಚರವಹಿಸುವಂತೆ ಸೂಚಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

ಚಿತ್ರದುರ್ಗ ಅಭ್ಯರ್ಥಿ ಗೋವಿಂದ ಕಾರಜೋಳ ಅವರೇ ಇಂದು ಮತ ಚಲಾಯಿಸಿಲ್ಲ : ಕಾರಣವೇನು ಗೊತ್ತಾ..?

ಚಿತ್ರದುರ್ಗ: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಮೇ 7 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಮತದಾರರೆಲ್ಲಾ ಬಹಳ ಉತ್ಸುಕತೆಯಿಂದ ಮತದಾನ ಮಾಡುತ್ತಿದ್ದಾರೆ. ಆದರೆ ಕೆಲ ಅಭ್ಯರ್ಥಿಗಳು ತಮ್ಮ ಮತವನ್ನು ತಾವೇ

error: Content is protected !!