Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಖಿಲ ಭಾರತ ಕನ್ನಡ ಸಮ್ಮೇಳನ :  ಪ್ರತಿನಿಧಿ ನೋಂದಣಿಗೆ ಡಿ.18 ಅಂತಿಮ ದಿನ

Facebook
Twitter
Telegram
WhatsApp

 

ಚಿತ್ರದುರ್ಗ : ಹಾವೇರಿಯಲ್ಲಿ ಜ.6 ರಿಂದ ಮೂರು ದಿನಗಳ ಜರುಗಲಿರುವ ಅಖಿಲ ಭಾರತ ಕನ್ನಡ ಸಮ್ಮೇಳನಕ್ಕೆ ಪ್ರತಿನಿಧಿ ನೊಂದಣಿಗೆ ಡಿ.18 ಅಂತಿಮ ದಿನವಾಗಿದೆ.

ಗೂಗಲ್ ಪ್ಲೇಸ್ಟೋರ್ ನಲ್ಲಿ ಕಸಾಪ ಎಂದು ಟೈಪ್ ಮಾಡಿದರೆ ಆಪ್ ತೆರೆದುಕೊಳ್ಳುತ್ತದೆ. ನಂತರ ಆನ್ ಲೈನ್ ನಲ್ಲಿ 500 ರೂಗಳನ್ನು ಪಾವತಿಸಿ ಪ್ರತಿನಿಧಿಯಾಗಲು ಅವಕಾಶವಿದೆ.

ಕಸಾಪ ಸದಸ್ಯರಾದ ನಂತರ ಪ್ರತಿನಿಧಿಯಾಗಿ ನೊಂದಾಯಿಸಬೇಕಾಗಿರುವುದು ಕಡ್ಡಾಯವಾಗಿದೆ. ಪ್ರತಿನಿಧಿಯಾಗಿ ನೊಂದಾಯಿಸಿದವರಿಗೆ ವಸತಿ, ರೈಟಿಂಗ್ ಪ್ಯಾಡ್, ಪೆನ್ನು ಸೇರಿದಂತೆ ಕಿಟ್,  ತಿಂಡಿ,ಊಟ ದ ಕೂಪನ್ ಮತ್ತು ಓಓಡಿ ಸೌಲಭ್ಯಗಳನ್ನು ನೀಡಲಾಗುವುದು.

ನೊಂದಾಯಿಸಿದವರಿಗೆ ಮಾತ್ರ ಸಮ್ಮೇಳನದಲ್ಲಿ ಭಾಗವಹಿಸಬಹುದು ಎಂಬ ಸುಳ್ಳು ವರದಿ ಹರಿದಾಡುತ್ತಿದೆ. ನೊಂದಾಯಿತ ಪ್ರತಿನಿಧಿಗಳಿಗೆ ವಸತಿ ಸೌಲಭ್ಯ ಮತ್ತು ಕೆಲವು ಸೌಲಭ್ಯಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.  ಸಮ್ಮೇಳನದಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಭಾಗವಹಿಸುವ ಎಲ್ಲರಿಗೂ ಊಟೋಪಚಾರದ ವ್ಯವಸ್ಥೆಯಿದೆ.

ಆನ್‍ಲೈನ್ ನೊಂದಣಿಯಲ್ಲಿ ಸಮಸ್ಯೆಗಳು ಉಂಟಾದಲ್ಲಿ ಸಹಾಯ ವಾಣಿ ಸಂಖ್ಯೆಗಳಾದ 8123878812, 9448519073, 7795662064 ಗಳನ್ನು ಸಂಪರ್ಕಿಸಬಹುದಾಗಿದೆ.

ಹಾವೇರಿ ಚಿಕ್ಕ ನಗರವಾಗಿರುವುದರಿಂದ ಪ್ರತಿನಿಧಿಗಳಿಗೆ ವಸತಿ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ನಿಶ್ಚಿತವಾದ ಸಂಖ್ಯೆ ಅಗತ್ಯವಿದೆ. ಹಾವೇರಿಯನ್ನು ಹೊರತುಪಡಿಸಿ ಸಮೀಪದ ನಗರಗಳಲ್ಲಿಯೂ ವಸತಿಯನ್ನು ನೀಡಲಾಗುತ್ತಿದೆ.

ನೋಂದಾಯಿಸಿದ ಪ್ರತಿನಿಧಿಗಳಿಗೆ ಹಾಸ್ಟೆಲ್, ಶಾಲೆ ಸೇರಿದಂತೆ ನಾನಾ ಕಡೆಗಳಲ್ಲಿ ವಸತಿ ಒದಗಿಸಲಾಗುತ್ತದೆ.  ಮೊದಲು ಬಂದವರಿಗೆ ಮೊದಲ ಆದ್ಯತೆ ರೂಪದಲ್ಲಿ ವಸತಿ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗೆ  ಸಂಪರ್ಕಿಸಿ 9449510078, 9448664878, 9449759219.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!