Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಫೆಬ್ರವರಿ 3 ಮತ್ತು 4 ರಂದು ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ ಶಿಪ್ ಪಂದ್ಯಾವಳಿ : ಶಂಕರ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಫೆ. 02 : ನಗರದ ಅನುಭವ ಮಂಟಪದಲ್ಲಿ ಫೆಬ್ರವರಿ 3 ಮತ್ತು 4 ರಂದು ಅಖಿಲ ಭಾರತ ಓಪನ್ ಕರಾಟೆ ಚಾಂಪಿಯನ್ ಶಿಫ್ ಮೇಘಾ ಕೆಸಿವಿ ಕಪ್ ಪಂದ್ಯಾವಳಿ ನಡೆಯಲಿದೆ ಎಂದು ಬ್ರೈಟ್ ಸ್ಟಾರ್ ಕರಾಟೆ ಅಸೋಶಿಯೇಷನ್ ಸಂಸ್ಥಾಪಕ ಶಂಕರ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 29 ನೇ ರಾಷ್ಟ್ರ ಮಟ್ಟದ ಪಂದಾವಳಿ ಇದಾಗಿದ್ದು, ಪಶ್ಚಿಮ ಬಂಗಾಳ, ತಮೀಳುನಾಡು, ಕೇರಳ, ಪಂಜಾಬ್, ಅಂಧ್ರ ಪ್ರದೇಶ, ತೆಲಾಂಗಣ ಮತ್ತು ಕರ್ನಾಟಕದಿಂದ 1500 ಕ್ಕಿಂತ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಇದರೊಂದಿಗೆ ವಿವಿಧ ರಾಜ್ಯಗಳಿಂದ 40 ಜನ ತೀರ್ಫುಗಾರರು ಆಗಮಿಸಲಿದ್ದಾರೆ.

6-25 ವರ್ಷ ವಯೋಮಾನದ ಕ್ರೀಡಾಪಟುಗಳಿಗೆ ಸ್ಪರ್ಧೆಗಳು ನಡೆಯಲಿದ್ದು, ಇದರಲ್ಲಿ 18-25 ವರ್ಷದೊಳಗಿನ ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುವಿಗೆ 25 ಸಾವಿರ ನಗದು ನೀಡಲಾಗುವುದು ಮತ್ತು ಪ್ರತಿ ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುವಿಗೆ ಆಕರ್ಷಕ ಟ್ರೋಫಿ ಹಾಗೂ ಪದಕಗಳನ್ನು ನೀಡಲಾಗುವುದು ಎಂದರು.

ಪಂದ್ಯಾವಳಿಯು ಫೆ.3 ರಂದು ಬೆಳಗ್ಗೆ 11.30ಕ್ಕೆ ಪಂದ್ಯಾವಳಿ ಉದ್ಘಾಟನೆ ಆಗಲಿದ್ದು, ಚಲನಚಿತ್ರ ನಟ ಸುಮನ್ ತಳವಾರ್, ಕ್ರೀಡಾ ಸಚಿವ ನಾಗೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಮಾಜಿ ಸಚಿವ ಹೆಚ್.ಆಂಜನೇಯ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ಸಂಗಮೇಶ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್, ನಗರಸಭೆ ಮಾಜಿ ಆಧ್ಯಕ್ಷ ಬಿ.ಕಾಂತರಾಜ್, ಚಿತ್ರ ನಟ ದೊಡ್ಡಣ್ಣ, ರಘು ಚಂದನ್, ಸಂದೀಪ್, ಭಾಸ್ಕರ್, ಸುರೇಶ್ ಬಾಬು, ಸೂರಪ್ಪ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಶೇಖರ್, ಸುರೇಶ್, ತಿಪ್ಪೇಸ್ವಾಮಿ, ತಿಪ್ಪೇಶ್, ಇರ್ಫಾನ್, ಕಿಶೋರ್ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!