Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾವೇರಿಗಾಗಿ ಸರ್ವಪಕ್ಷ ಸಭೆ ಆರಂಭ : ಸಭೆಗೆ ಗೈರಾದವರು ಯಾರು ?

Facebook
Twitter
Telegram
WhatsApp

 

ಬೆಂಗಳೂರು: ರಾಜ್ಯದಲ್ಲಿ ಮಳೆಯಿಲ್ಲದೆ ರೈತರು ಕಂಗಾಲಾಗಿದ್ದಾರೆ. ಮಳೆ ಬರುವಿಕೆಗಾಗಿಯೇ ಕಾಯುತ್ತಿದ್ದಾರೆ. ಸದ್ಯ ಡ್ಯಾಂಗಳಲ್ಲಿ ಇರುವ ನೀರನ್ನೇ ಗಟ್ಟಿ ಎನ್ನಲಾಗಿದೆ. ಅದರ ಜೊತೆಗೆ ಡ್ಯಾಂನಲ್ಲೂ ದಿನೇ ದಿನೇ ನೀರು ಕಡಿಮೆಯಾಗ್ತಾ ಇದೆ. ಹೀಗಿರುವಾಗ ಪ್ರತಿದಿನ ದಿನ ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಎಷ್ಟು ಸರಿ ಎಂಬ ಪ್ರಶ್ನೆ ಎದುರಾಗಿದೆ. ರಾಜ್ಯ ಸರ್ಕಾರದ ನಡೆಯನ್ನು ರೈತರು, ಬಿಜೆಪಿ ನಾಯಕರು ಖಂಡಿಸಿದ್ದಾರೆ.

ಈ ಸಂಬಂಧ ಇಂದು ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧಸಭೆ ಆರಂಭವಾಗಿದೆ. ಇನ್ನು ಈ ಸಭೆಯಲ್ಲಿ ಕಾವೇರಿ, ಮೇಕೆದಾಟು, ಮಹಾದಾಯಿ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಯಲಿದೆ. ಈ ಸಭೆಯಲ್ಲಿ ಮಾಜಿ ಸಿಎಂ ಗಳಾದ ಯಡಿಯೂರಪ್ಪ, ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಅವರು ಪಾಲ್ಗೊಂಡಿದ್ದಾರೆ.

ಅದರ ಜೊತೆಗೆ ಜಗದೀಶ ಶೆಟ್ಟರ್, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ್, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಜಗ್ಗೇಶ್ ಸೇರಿದಂತೆ ಎಲ್ಲಾ ಪಕ್ಷಗಳ ಶಾಸಕರು, ಸಂಸದರು ಭಾಗಿಯಾಗಿದ್ದಾರೆ.

ಆದ್ರೆ ಇದು ಸರ್ವಪಕ್ಷಗಳ ಸಭೆಯಾದರೂ ಪ್ರಹ್ಲಾದ ಜೋಷಿ, ಶೋಭಾ ಕರಂದ್ಲಾಜೆ, ಭಗವಂತ ಖೂಬಾ, ನಿರ್ಮಲಾ ಸೀತಾರಾನ್, ಎ ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್ ಗೈರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!