Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಚಿವ ಸ್ಥಾನ ಸಿಕ್ಕರೂ ಕುರ್ಚಿ ಬಿಸಿ ಮಾಡಬೇಕು ಅಷ್ಟೇ : ಎಂ ಪಿ ಕುಮಾರಸ್ವಾಮಿ

Facebook
Twitter
Telegram
WhatsApp

ಚಿಕ್ಕಮಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಬಂದಿದ್ದಾರೆ. ಇದು ಸಚಿವಾಕಾಂಕ್ಷಿಗಳಿಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ. ಇದೇ ವಿಚಾರಕ್ಕೆ ಮಾಧ್ಯಮದವರು ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದಾಗ, ಈಗ ಸಚಿವ ಸ್ಥಾನ ಸಿಕ್ಕಿದರು ಕುರ್ಚಿ ಮೇಲೆ ಕೂತು ಬಿಸಿ ಮಾಡಬೇಕಾಗುತ್ತದೆ ಅಷ್ಟೇ ಎಂದಿದ್ದಾರೆ.

ನನಗೆ ಈಗ ಸಮಯವಿಲ್ಲ. ಹಳ್ಳಿಯಲ್ಲಿ ಸಾಕಷ್ಟು ಕೆಲಸಗಳಿವೆ. ನನ್ನ ಕ್ಷೇತ್ರದಲ್ಲಿಯೇ ನನಗೆ ಹೆಚ್ಚು ಕೆಲಸವಿದೆ. ಕೊಟ್ಟರೆ ಕೊಡಲಿ. ಇಲ್ಲದಿದ್ದರು ಪರವಾಗಿಲ್ಲ. ಸರ್ಕಾರ ಬಂದ ಮೇಲೆ ಅತಿವೃಷ್ಟಿಯಲ್ಲಿ ಬಳಲಿ ಹೋಗಿದೆ. ಅಭಿವೃದ್ದಿಗೆ ಸ್ವಲ್ಪ ಕುಂಠಿತವಾಗಿತ್ತು. ಹೀಗಾಗಿ ಅಭಿವೃದ್ಧಿಯತ್ತ ಗಮನ ಕೊಡುತ್ತಿದ್ದೇನೆ. ಸಚಿವ ಸಂಪುಟದ ಬಗ್ಗೆ ಹೆಚ್ಚು ಗಮನ ಕೊಡುತ್ತಿಲ್ಲ.

ಕಾಮಗಾರಿ ವಿಚಾರದಲ್ಲಿ ಗಡ್ಕರಿಯವರನ್ನು ಭೇಟಿ ಮಾಡಬೇಕಿತ್ತು. ಆ ವಿಚಾರವಾಗಿ ದೆಹಲಿಗೆ ಹೋಗಿದ್ದೆ. ಬೇಡ ಅಂತ ಅಲ್ಲ ಈಗ ನನಗೆ ಬೇಡ. ಸಚಿವ ಸ್ಥಾನ ಕೊಟ್ಟರು ಈಗ ಏನು ಸಾಧನೆ ಮಾಡುವುದಕ್ಕೆ ಸಾಧ್ಯವಿಲ್ಲ. ಸೀಟಿನ ಮೇಲೆ ಕೂರಬಹುದೇ ವಿನಃ ಮಹತ್ಕರವಾದ ಕ್ರಾಂತಿಕಾರಿ ಬದಲಾವಣೆ ಮಾಡಲು ಈ ಎಂಟು ತಿಂಗಳಲ್ಲಿ ಸಾಧ್ಯವಿಲ್ಲ. ಆ ಸೀಟನ್ನು ಬಿಸಿ ಮಾಡಬೇಕು ಅಷ್ಟೇ. ಆ ಸೀಟು ಬಿಸಿ ಮಾಡುವುದಕ್ಕೂ ಸಾಧ್ಯವಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!