Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

‘ಸಚಿವ ಸ್ಥಾನಕ್ಕೋಸ್ಕರ ಇಷ್ಟೆಲ್ಲ ನಡು ಬಗ್ಗಿಸಬೇಕಾ..?’

---Advertisement---

ಬೆಂಗಳೂರು: ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಮೇಲೆ ಕುಮಾರಸ್ವಾಮಿ ಅವರು ಕೇಂದ್ರದ ಸಚಿವರಾಗಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಈ ಸಂಬಂಧ ವ್ಯಂಗ್ಯವಾಡಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರವಿರುವ ಏಕೈಕ ಕಾರಣಕ್ಕೆ ಕಳೆದ ಎರಡೂವರೆ ವರ್ಷಗಳಿಂದ ಕೇಂದ್ರದ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ರಾಜ್ಯದ ಮೇಲೆ ದ್ರೋಹ ಎಸಗುತ್ತಿದೆ ಎಂದಿದ್ದಾರೆ.

ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆಯಲ್ಲಿ ನ್ಯಾಯಯುತ ಪಾಲು ನೀಡದೆ ವಂಚಿಸುತ್ತಿರುವುದಲ್ಲದೆ, ಕರ್ನಾಟಕದ ನೀರಾವರಿ, ರೈಲ್ವೆ, ಹೆದ್ದಾರಿ ಸೇರಿದಂತೆ ಎಲ್ಲಾ ತೆರನಾದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮತ್ತು ಅನುಮತಿ ನೀಡದೆ ಕನ್ನಡಿಗರನ್ನು ಕಡೆಗಣಿಸಲಾಗುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯ ವೇಳೆ ಬಿಜೆಪಿಗೆ ಮತ ನೀಡದಿದ್ದರೆ ಮೋದಿಯವರ ಆಶೀರ್ವಾದದಿಂದ ವಂಚಿತರಾಗುತ್ತೀರಿ ಎನ್ನುವ ಬೆದರಿಕೆ ಒಡ್ಡಿದ್ದ ಬಿಜೆಪಿ ನಾಯಕ ಜೆಪಿ ನಡ್ಡಾ ಅವರ ಹೇಳಿಕೆಯನ್ನು ಅಕ್ಷರಶಃ ಕೇಂದ್ರ ಸರ್ಕಾರ ಕಾರ್ಯರೂಪಕ್ಕೆ ತಂದಂತಿದೆ.

ಬಿಜೆಪಿ ಪಕ್ಷದಿಂದ ಗೆದ್ದು ಸಂಸದರು ಮತ್ತು ಕೇಂದ್ರದಲ್ಲಿ ಮಂತ್ರಿಗಳು ಆಗಿರುವವರಿಗೆ ಪ್ರಧಾನಿಗಳ ಎದುರು ಈ ಮಲತಾಯಿ ಧೋರಣೆಯ ವಿರುದ್ಧ ಮಾತನಾಡುವ ಧೈರ್ಯವಾಗಲಿ, ಮತನೀಡಿದ ಜನರ ಬಗ್ಗೆ ಕಾಳಜಿಯಾಗಲಿ ಯಾವುದೂ ಇಲ್ಲ. ಮೈಕ್ ಮುಂದೆ ಏರುದನಿಯಲ್ಲಿ ದ್ವೇಷ ಬಿತ್ತುವ ಇವರಿಗೆ ಮೋದಿಯವರನ್ನು ಕಂಡೊಡನೆ ಕೈಕಾಲು ನಡುಗುತ್ತದೆ.

ಕನ್ನಡಿಗರಿಗೆ ಇಷ್ಟೆಲ್ಲಾ ಅನ್ಯಾಯಗಳು ಆಗುತ್ತಿದ್ದರೂ ಅದರ ವಿರುದ್ಧ ದನಿಯೆತ್ತದೆ ಕೇವಲ ಸ್ವಹಿತಕ್ಕಾಗಿ ಕೇಂದ್ರ ಸರ್ಕಾರದ ಅಡಿಯಾಳಿನಂತೆ ವರ್ತಿಸುತ್ತಿರುವ ಕರ್ನಾಟಕದ ಪ್ರಾದೇಶಿಕ ಪಕ್ಷ ಜೆಡಿಎಸ್ ಮತ್ತು ಅದರ ನಾಯಕ ಹೆಚ್.ಡಿ.ಕುಮಾರಸ್ವಾಮಿ ನಡೆ ಅಸಹ್ಯ ಹುಟ್ಟಿಸುವಂತಿದೆ. ಒಂದು ಸಚಿವ ಸ್ಥಾನಕ್ಕಾಗಿ ಇಷ್ಟೆಲ್ಲಾ ನಡುಬಗ್ಗಿಸಿ ನಿಲ್ಲಬೇಕೇ? ಇದು ನನ್ನೊಬ್ಬನ ಪ್ರಶ್ನೆ ಅಲ್ಲ, ನೊಂದ ಕನ್ನಡಿಗರೆಲ್ಲರ ಪ್ರಶ್ನೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now