ಕಾರ್ಯಕ್ರಮಕ್ಕೆ ಬಂದಿರುವ ಎಲ್ಲರೂ ಸುರಕ್ಷಿತವಾಗಿ ಮನೆಗೆ ತೆರಳಬೇಕು : ನಿಖಿಲ್ ಕುಮಾರಸ್ವಾಮಿ

suddionenews
1 Min Read

ಕೋಲಾರ: ಜೆಡಿಎಸ್ ಪಕ್ಷದಿಂದ ಜನರ ಬಳಿಗೆ ಹೋಗುವುದಕ್ಕೆ ಪಂಚರತ್ನ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಂಚರತ್ನ ಯಾತ್ರೆಗೆ ಇಂದು ಜಿಲ್ಲೆಯಲ್ಲಿ ಚಾಲನೆ ನೀಡಲಾಗಿದೆ. ಈ ವೇಳೆ ವೇದಿಕೆ ಮೇಲೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಪಂಚರತ್ನ ಯಾತ್ರೆ ಕುಮಾರಸ್ವಾಮಿ ಅವರ ಕನಸಿನ ಕೂಸು. ಈ ಕಾರ್ಯಕ್ರಮಕ್ಕೆ ಬಂದಿರುವ ನೀವೆಲ್ಲಾ ದೇವೇಗೌಡ ಹಾಗೂ ಕುಮಾರಸ್ವಾಮಿ ಅವರ ಆಸ್ತಿ. ಎಲ್ಲರು ಮನೆಗೆ ಸುರಕ್ಷಿತವಾಗಿ ತಲುಪಬೇಕು ಎಂದಿದ್ದಾರೆ.

ಇನ್ನು ಈ ವರ್ಷದ ಚುನಾವಣೆಯಲ್ಲಿ ಮಾತನಾಡಿದ ಅವರು, ಕುಮಾರಣ್ಣ ರೈತ ಕುಟುಂಬದಲ್ಲಿ ಹುಟ್ಟಿದವರು. ಅವರಿಗೆ ರೈತರ ಕಷ್ಟಗಳು ಏನೆಂಬುದು ಚೆನ್ನಾಗಿ ಗೊತ್ತು. ಅದಕ್ಕೆಂದೆ ಅಧಿಕಾರಕ್ಕೆ ಬಂದಾಗೆಲ್ಲಾ ರೈತರ ಸಾಲಮನ್ನಾ ಮಾಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಸಹಾಯ ಮಾಡಿದ್ದಾರೆ. ಕಳೆದ ಬಾರಿಯೂ ಕೊಟ್ಟ ಮಾತಿನಂತೆ ರೈತರ ಸಾಲಮನ್ನಾ ಮಾಡಿದ್ದಾರೆ.

1992ರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಪ್ರಚಾರ ಆರಂಭಿಸಿದ್ದರು. ಆಗ ಜಾತ್ಯಾತೀತ ಜನತಾ ದಳ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬಂದಿತ್ತು. ಮತ್ತೆ ಅದೇ ಇತಿಹಾಸ ಮರುಕಳುಹಿಸುವುದರಲ್ಲಿ ಯಾವುದೇ ಸಂಶಯವಿಲ್ಲ. ನಿಮ್ಮೆಲ್ಲರ ಆಶೀರ್ವಾದ ನಮ್ಮ ಮೇಲಿರಬೇಕು ಎಂದು ನಿಖಿಲ್ ಕುಮಾರಸ್ವಾಮಿ ಕೇಳಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *