ಸರ್ಕಾರಿ ಜಮೀನು ಒತ್ತುವರಿ ಆರೋಪ ; ಸೈಲೆಂಟ್ ಆಗಿದ್ದ ಹೆಚ್ಡಿಕೆ ಸಿಡಿದೆದ್ದು ಹೇಳಿದ್ದೇನು..?

 

 

ಬೆಂಗಳೂರು; ಕೇತಗಾನಹಳ್ಳಿಯಲ್ಲಿ ಸರ್ಕಾರಿ ಒತ್ತುವರಿ ಆರೋಪ ಹೊತ್ತಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸರ್ವೇ ಆದರೂ ಕೂಡ ಸೈಲೆಂಟ್ ಆಗಿದ್ದರು. ಇದೀಗ ಸುದ್ದಿಗೋಷ್ಟಿ ನಡೆಸಿ ವೈಲೆಂಟ್ ಆಗಿದ್ದಾರೆ. ನನಗೆ ನೋಟೀಸ್ ಕೊಡುವುದು ಇರಲೊ. ಕೆಳಹಂತದ ಅಧಿಕಾರಿಗಳನ್ನು ನಾನು ಪ್ರಶ್ನೆ ಮಾಡಲ್ಲ. ಎಸ್ಐಟಿ ತಂಡ ರಚಿಸಿ, ತನಿಖೆ ನಡೆಸಿದ್ದಾರೆ. ಇದು ಇತಿಹಾಸದಲ್ಲಿಯೇ ಪ್ರಥಮ.

ಈ ಸರ್ಕಾರಕ್ಕೆ ಸವಾಲು ಹಾಕುವುದಕ್ಕೆ ನಾನು ಬಂದಿದ್ದೇನೆ. ಇಂದಿನಿಂದ ಸರ್ಕಾರದ ವಿರುದ್ಧ ನನ್ನ ಯುದ್ಧ ಆರಂಭ ಮಾಡುತ್ತಿದ್ದೇನೆ. ರಾಜ್ಯದಲ್ಲಿ ನಡೆಯುತ್ತಿರುವ ಈ ಸರ್ಕಾರದ ಅಕ್ರಮಗಳು, ದರೋಡೆಯ ಕೆಲಸಗಳು ನಡೆಯುತ್ತಿವೆ. ಗಜನಿ, ಮಹಮ್ಮದ್ ಸೇರಿ ಈ ಹಿಂದೆ ಮೂರು ಜನ ಪ್ರಮುಖರು ಇದ್ದರು. ಈ ಸರ್ಕಾರದ ಬಗ್ಗೆ ಮಾತನಾಡಿದ್ರೆ ನಿರಾಸೆ ಆಗಬಹುದು. ಹನಿಟ್ರ್ಯಾಪ್, ಕೊಲೆ ಸುಪಾರಿ ಬಗ್ಗೆ ಚರ್ಚೆಯಾಗುತ್ತಿದೆ. ಎಂತಹ ಪರಿಸ್ಥಿತಿಗೆ ಬಂದಿದ್ದಾರೆ ನೋಡಿ.

ನಾನು ಹೇಳುವ ವಿಚಾರಗಳನ್ನು ಜನರ ಮುಂದೆ ಇಡಬಹುದು. ಈ ಸರ್ಕಾರಕ್ಕೆ ಸವಾಲು ಹಾಕಲು ನಾನು ಬಂದಿದ್ದೇನೆ. ಸರ್ಕಾರದ ವಿರುದ್ಧ ನನ್ನ ಯುದ್ಧ. 40 ವರ್ಷಗಳ ಹಿಂದೆ ಭೂಮಿ ಖರೀದಿ ಮಾಡಿದ್ದೆ. ದ್ವೇಷ ರಾಜಕಾರಣ ನಡೆಯುತ್ತಿದೆ. ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಂಡು ರಾಜಕಾರಣ ಮಾಡುತ್ತಿದ್ದಾರೆ. ನಾಲ್ಕೈದು ಜೆಸಿಪಿ, 25-30 ಅಧಿಕಾರಿಗಳು, ಪೊಲೀಸರು ಬೇರೆ. ಕುಮಾರಸ್ವಾಮಿ ಬೆಂಬಲಿಗರು ದಾಳಿ ಮಾಡುತ್ತಾರೆಂದು ಪೊಲೀಸರನ್ನ ಕರೆದುಕೊಂಡು ಬಂದಿದ್ದರು. 70 ಎಕರೆ ಒತ್ತುವರಿ ಅಂತೆ. ನನ್ನಲ್ಲಿ 40 ಎಕರೆ ಮಾತ್ರ ಇದೆ. ಅತಿಕ್ರಮಣ, ಅಕ್ರಮ ಮಾಡಿದ್ರೆ ದಾಖಲೆ ಬಿಡುಗಡೆ ಮಾಡಲಿ ಅಂತ ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

suddionenews

Recent Posts

ಆಲಪ್ಪುಳ ಜಿಮ್ಖಾನಾ’ ಕರ್ನಾಟಕ ಜನರ ಮನಸ್ಸು ಗೆದ್ದ ಕ್ರೀಡಾ ಹಾಸ್ಯ ಚಿತ್ರ!

  ಅಲಪ್ಪುಳ ಜಿಮ್ಖಾನಾ ಎಂಬುದು ಮಲಯಾಳಂ ಆಕ್ಷನ್ ಚಿತ್ರ, ಖಲೀದ್ ರೆಹಮಾನ್ ನಿರ್ದೇಶಿಸಿದ್ದಾರೆ, ಇದರಲ್ಲಿ ನಾಸ್ಲಿನ್ ಗಫೂರ್ ಮತ್ತು ಲುಕ್ಮಾನ್…

2 hours ago

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…

8 hours ago

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

18 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

18 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

19 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

19 hours ago