ಕರ್ತವ್ಯಲೋಪವೆಸಗಿದ ಆರೋಪ : 27 ಇಂಜಿನಿಯರ್ ಗಳ ಅಮಾನತು ಮಾಡಿದ ಗ್ರಾಮೀಣಾಭಿವೃದ್ಧಿ ಇಲಾಖೆ..!

suddionenews
1 Min Read

ಕರ್ತವ್ಯಲೋಪವೆಸಗಿದ ಆರೋಪದ ಮೇಲೆ 27 ಇಂಜಿನಿಯರ್ ಗಳನ್ನು ಪಂಚಾಯತ್ ರಾಜ್ ಇಲಾಖೆ ಅಮಾನತು ಮಾಡಿ, ಆದೇಶ ಹೊರಡಿಸಿದೆ. ವರ್ಗಾಹಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಅಮಾನತುಗೊಂಡ ಇಂಜಿನಿಯರ್ ಗಳ ಮೇಲಿದೆ‌. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.

 

ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ವಜಾ ಮಾಡಿದೆ. ನಾಗರಿಕಾ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲಾ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇದಶದವರೆಗೂ ಅಮಾನತುಪಡಿಸಲಾಗಿದೆ.

ಅಮಾನತುಗೊಂಡವರಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, 7 ಸಹಾಯಕ ಇಂಜಿನಿಯರ್ ಗಳು, 15 ಮಂದಿ ಜೂನಿಯರ್ ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ. ಇನ್ನು ಅಮಾನತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *