ಕರ್ತವ್ಯಲೋಪವೆಸಗಿದ ಆರೋಪದ ಮೇಲೆ 27 ಇಂಜಿನಿಯರ್ ಗಳನ್ನು ಪಂಚಾಯತ್ ರಾಜ್ ಇಲಾಖೆ ಅಮಾನತು ಮಾಡಿ, ಆದೇಶ ಹೊರಡಿಸಿದೆ. ವರ್ಗಾಹಿಸಿದ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯಲೋಪವೆಸಗಿದ್ದಾರೆ ಎಂಬ ಆರೋಪ ಅಮಾನತುಗೊಂಡ ಇಂಜಿನಿಯರ್ ಗಳ ಮೇಲಿದೆ. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ.
ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಸಹಾಯಕ ಇಂಜಿನಿಯರ್, ಜೂನಿಯರ್ ಇಂಜಿನಿಯರ್ ಗಳನ್ನು ಸೇವೆಯಿಂದ ವಜಾ ಮಾಡಿದೆ. ನಾಗರಿಕಾ ಸೇವಾ ನಿಯಮಗಳು 1957ರ ನಿಯಮ 10(1) (ಡಿ) ಅಡಿ ಪ್ರದತ್ತವಾದ ಅಧಿಕಾರದನ್ವಯ ಈ ಎಲ್ಲಾ ಅಧಿಕಾರಿಗಳನ್ನು ಇಲಾಖಾ ತನಿಖೆ ಕಾದಿರಿಸಿ ಮುಂದಿನ ಆದೇದಶದವರೆಗೂ ಅಮಾನತುಪಡಿಸಲಾಗಿದೆ.
ಅಮಾನತುಗೊಂಡವರಲ್ಲಿ 5 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, 7 ಸಹಾಯಕ ಇಂಜಿನಿಯರ್ ಗಳು, 15 ಮಂದಿ ಜೂನಿಯರ್ ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ. ಇನ್ನು ಅಮಾನತುಗೊಂಡಿರುವ ಅಧಿಕಾರಿಗಳನ್ನು ತಕ್ಷಣವೇ ಹುದ್ದೆಯಿಂದ ಬಿಡುಗಡೆ ಮಾಡಲು ಸೂಚನೆ ನೀಡಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










