Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರಡು ಮತದಾರ ಪಟ್ಟಿ ಪ್ರಕಟಣೆ : ಮತದಾರರಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ

Facebook
Twitter
Telegram
WhatsApp

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ನ.08) : ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ-2023ರ ಸಂಬಂಧ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಇದರ ಅನುಸಾರ ಇದೇ ನವೆಂಬರ್ 9 ರಂದು ಕರಡು ಮತದಾರ ಪಟ್ಟಿ ಪ್ರಕಟಣೆ ಮಾಡಲಾಗುವುದು. ನವೆಂಬರ್ 9 ರಿಂದ ಡಿಸೆಂಬರ್ 8 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನವೆಂಬರ್ 12, ನವೆಂಬರ್ 20, ಡಿಸೆಂಬರ್ 03 ಹಾಗೂ ಡಿಸೆಂಬರ್ 04 ರಂದು ಮಿಂಚಿನ ನೋಂದಣಿ ಕಾರ್ಯಚರಣೆ ನಡೆಯಲಿದೆ. ಡಿಸೆಂಬರ್ 26 ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ತೀರ್ಮಾನಿಸಲಾಗುವುದು. 2023ರ ಜನವರಿ 05 ರಂದು ಮತದಾರರ ಅಂತಿಮ ಪಟ್ಟಿ ಪ್ರಕಟಣೆ ಮಾಡಲಾಗುವುದು.

2023 ಜನವರಿ 01ಕ್ಕೆ 18 ವರ್ಷ ಪೂರ್ಣಗೊಳ್ಳುವವರು ಹಾಗೂ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಲ್ಲದವರು ಹಾಗೂ ಹೆಸರು ಕೈಬಿಟ್ಟುಹೋಗಿರುವವರು ಹಾಗೂ ಮತದಾರರ ಪಟ್ಟಿಯಲ್ಲಿ ಮಾಹಿತಿಯನ್ನು ತಿದ್ದುಪಡಿ ಮಾಡಿಸಬೇಕಾದಲ್ಲಿ ಮತ್ತು ಬೇರೆ ಮತಗಟ್ಟೆ, ಕ್ಷೇತ್ರಕ್ಕೆ ವರ್ಗಾಹಿಸಬೇಕಾಗಿದ್ದಲ್ಲಿ ನಿಗದಿಪಡಿಸಿರುವ ನಮೂನೆಗಳಾದ 6,7 ಮತ್ತು 8ಗಳಲ್ಲಿ ಅರ್ಜಿಯನ್ನು ಭರ್ತಿ ಮಾಡಿ ದಾಖಲಾತಿಗಳೊಂದಿಗೆ ತಮ್ಮ ವ್ಯಾಪ್ತಿಯ ಮತದಾನ ಕೇಂದ್ರದಲ್ಲಿ, ತಾಲ್ಲೂಕು ಕಚೇರಿಯಲ್ಲಿ, ಉಪವಿಭಾಗಾಧಿಕಾರಿಗಳವರ ಕಾರ್ಯಾಲಯದಲ್ಲಿ ನೀಡಿ ಸ್ವೀಕೃತಿ ಪಡೆಯಬಹುದಾಗಿದೆ.

ಅಲ್ಲದೇ ಭಾರತ ಚುನಾವಣಾ ಆಯೋಗವು ಹೊಸದಾಗಿ ಮತದಾರರ ಸಹಾಯವಾಣಿ (voter Help line App) ನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಮತದಾರರ ಸಹಾಯವಾಣಿ (voter Help line App)  ಮುಖಾಂತರವೇ ಆನ್‍ಲೈನ್‍ನಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

error: Content is protected !!