Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಲ್ಲು ಅರ್ಜುನ್ ಅರೆಸ್ಟ್ : ಕಾರಣವೇನು ಗೊತ್ತಾ..?

---Advertisement---

ಈಗಷ್ಟೇ ಪುಷ್ಪ-2 ‌ಸಿನಿಮಾದ ಯಶಸ್ಸಿನ ಪಯಣದಲ್ಲಿರುವ ನಟ ಅಲ್ಲು ಅರ್ಜುನ್ ಅವರನ್ನು ಹೈದ್ರಾಬಾದ್ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಪಡಪಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುಷ್ಪ-2 ಸಿನಿಮಾ ನೋಡಲು ಹೋದ ಮಹಿಳೆಯೊಬ್ಬರು ಕಾಲ್ತುಳಿತದಿಂದ ನಿಧನರಾಗಿದ್ದರು. ಈ ಸಂಬಂಧ ಕೇಸ್ ದಾಖಲಾಗಿತ್ತು. ಹೀಗಾಗಿ ಬಂಧಿಸಲಾಗಿದೆ.

ಪುಷ್ಪ-2 ಸಿನಿಮಾ ದೇಶದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಿನಿಮಾದ ಅವಧಿ ಜಾಸ್ತಿ ಇದ್ದರು, ಅಭಿಮಾನಿಗಳು ತಾಳ್ಮೆಯಿಂದ, ಖುಷಿಯಿಂದ ಸಿನಿಮಾ ನೋಡಿ ಸಂಭ್ರಮಿಸುತ್ತಿದ್ದಾರೆ. ಎಲ್ಲಾ ಭಾಷೆಯಲ್ಲೂ ಕೋಟಿ ಕೋಟಿ ಹಣ ಬಾಚುತ್ತಿದೆ. ಸಾವಿರ ಕೋಟಿ ಕಲೆಕ್ಷನ್ ಮಾಡುವ ನಿರೀಕ್ಷೆ ಇದೆ. ಬಾಕ್ಸ್ ಆಫೀಸ್ ನಲ್ಲಿ ಇಷ್ಟು ದೊಡ್ಡಮಟ್ಟಕ್ಕೆ ಕಲೆಕ್ಷನ್ ಮಾಡಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಆ ಸಂಭ್ರಮದಲ್ಲಿಯೇ ಮಿಂದೇಳುತ್ತಿದ್ದಾರೆ.

ಆದರೆ ಈ ಸಂಭ್ರಮದ ನಡುವೆ ಸಿನಿಮಾ ತಂಡಕ್ಕೆ ಬರಸಿಡಿಲಿನಂತೆ ಬಡಿದಿರುವುದು ಅಲ್ಲು ಅರ್ಜುನ್ ಅರೆಸ್ಟ್ ಆದ ಸುದ್ದಿ. ಅದು ಸಿನಿಮಾಗೆ ಸಂಬಂಧಿಸಿದ ಸುದ್ದಿಯೇ ಆಗಿದೆ. ಡಿಸೆಂಬರ್ 4ರಂದು ಅಲ್ಲು ಅರ್ಜುನ್ ಅಭಿಮಾನಿಗಳ ಜೊತೆಗೆ ಸಿನಿಮಾ ನೋಡುವುದಕ್ಕೆ ನಿರ್ಧರಿಸಿದ್ದರು. ಅಂತೆಯೇ ಹೈದ್ರಾಬಾದ್ ನ ಸಂಧ್ಯಾ ಥಿಯೇಟರ್ ಗೆ ಬಂದರು. ಈ ವೇಳೆ ಅವರನ್ನು ನೋಡುವುದಕ್ಕಾಗಿಯೇ ಅಭಿಮಾನಿಗಳು ಮುಗಿಬಿದ್ದಿದ್ದರು. ಆ ಕಾಲ್ತುಳಿತದಿಂದ ರೇವತಿ ಎಂಬ ಮಹಿಳೆ ಪ್ರಾಣ ಕಳೆದುಕೊಂಡರು. ಅಭಿಮಾನಿಯ ಸಾವಿನ ಸಂಬಂಧ ಅಲ್ಲು ಅರ್ಜುನ್ ವಿರುದ್ಧ ದೂರು ದಾಖಲಾಗಿತ್ತು. ಯಾಕಂದ್ರೆ ಅಲ್ಲು ಅರ್ಜುನ್ ಥಿಯೇಟರ್ ಗೆ ಬರುವ ಬಗ್ಗೆ ಪೊಲೀಸರಿಗೆ ಮಾಹಿತಿ ಇರಲಿಲ್ಲ. ಖಾಸಗಿ ಭದ್ರತೆಯೊಂದಿಗೆ ಬಂದಿದ್ದರು. ನೂಕು ನುಗ್ಗಲು ಉಲ್ಬಣವಾಗಿ ಮಹಿಳೆಯ ಸಾವಾಗಿತ್ತು. ಈ ಸಾವಿಗೆ ಥಿಯೇಟರ್ ಆಡಳಿತವೆ ಹೊಣೆ ಎಂಬ ಆರೋಪವಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...