Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

Facebook
Twitter
Telegram
WhatsApp

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್ ನಟ ಅಲ್ಲು ಅರ್ಜುನ್ ಕೂಡ ಹೊರತಾಗಿಲ್ಲ. ಅವಮಾನಗಳಾಗದೆ ಇದ್ದರೂ, ಅವಕಾಶಗಳ ಬಾಗಿಲು ತೆರೆದಿದ್ದು ಸುಲಭವಾಗಿರಲಿಲ್ಲ. ಆ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಹೇಳಿಕೊಂಡಿದ್ದಾರೆ.

ಅಲ್ಲು ಅರ್ಜುನ್ ಗೆ ಆರ್ಯ ಸಿನಿಮಾದ ಬಳಿಕ ಅವಕಾಶದ ಬಾಗಿಲು ತೆರೆಯಿತು. ಸುಕುಮಾರನ್ ಈ ಸಿನಿಮಾ ನಿರ್ದೇಶನ ಮಾಡಿದ್ದರು. ಅಂದು ಜೊತೆಯಾದ ಈ ಜೋಡಿ ಇಂದು ಪುಷ್ಪವರೆಗೂ ಬಂದು ನಿಂತಿದೆ. ಅಲ್ಲು ಅರ್ಜುನ್ ಆರ್ಯ ಸಿನಿಮಾ ಮಾಡುವುದಕ್ಕೂ ಮುನ್ನ ಗಂಗೋತ್ರಿ ಸಿನಿಮಾ ಮಾಡಿದ್ದರು. ಸಿನಿಮಾ ಸಕ್ಸಸ್ ಆಯ್ತು, ಆದರೆ ಅವಕಾಶಗಳು ಸಿಕ್ಕಿರಲಿಲ್ಲ. ಆರ್ಯ ರಿಲೀಸ್ ಆಗಿ ಇಂದಿಗೆ 20 ವರ್ಷ‌. ಆ ಸಂಭ್ರಮದ ಕ್ಷಣದಲ್ಲಿ ಅಲ್ಲು ಅರ್ಜುನ್ ಹಳೆಯ ಕಹಿ ಘಟನೆಯನ್ನು ನೆನೆದಿದ್ದಾರ.

‘ನಾನು ನಟಿಸಿದ ಗಂಗೋತ್ರಿ ಸಿನಿಮಾ ಹಿಟ್ ಆಯಿತು. ಆದರೆ ಆ ಸಮಯದಲ್ಲಿ ನಾನು ನೋಡೋಕೆ ಅಷ್ಟೇನು ಚೆನ್ನಾಗಿಲ್ಲ ಎಂಬ ಕಾರಣಕ್ಕೆ ಅವಕಾಶಗಳು ಬರಲಿಲ್ಲ‌. ಗಂಗೋತ್ರಿ ಸಿನಿಮಾ ಯಶಸ್ವಿಯಾಯ್ತು. ಆದರೆ ಹೀರೋ ಆಗಿ ಗುರುತಿಸಿಕೊಳ್ಳುವಲ್ಲಿ ನಾನು ಸೋತೆ. ನಿತಿನ್ ನಟನೆಯ ದಿಲ್ ಸಿನಿಮಾವನ್ನು ನೋಡಲು ಹೋಗಿದ್ದಾಗ, ಅಲ್ಲಿ ನನಗೆ ಸುಕುಮಾರ್ ಪರಿಚಯವಾಯಿತು. ಆರ್ಯ ಚಿತ್ರಕ್ಕಾಗಿ ಅವರು ನನ್ನನ್ನು ಆಯ್ಕೆ ಮಾಡಿದರು. ಅವರು ಆಗ ಹೊಸ ನಿರ್ದೇಶಕರಾಗಿದ್ದರು. ಆದರೆ ಅವರು ಸ್ಕ್ರಿಪ್ಟ್ ಬರೆದ ರೀತಿ ನನಗೆ ತುಂಬಾ ಇಷ್ಟವಾಗಿತ್ತು’ ಎಂದು ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!