Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಲ್ಲು ಅರ್ಜುನ್ ಬಂಧನ ಪ್ರಕರಣ : ದೇವರನ್ನು ಬಂಧಿಸುತ್ತೀರಾ ? ತೆಲಂಗಾಣ ಪೊಲೀಸರಿಗೆ ಪ್ರಶ್ನೆಗಳ ಸುರಿಮಳೆಗೈದ ರಾಮ್ ಗೋಪಾಲ್ ವರ್ಮಾ…!

---Advertisement---

ಸುದ್ದಿಒನ್ | ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಬಂಧನದ ಬಗ್ಗೆ ವಿವಾದಾತ್ಮಕ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕುತೂಹಲಕಾರಿ ಪೋಸ್ಟ್ ಹಾಕಲಾಗಿದೆ.

 

ಆರ್‌ಜಿವಿ ತೆಲಂಗಾಣ ಪೊಲೀಸರ ಮೇಲೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಉತ್ತರಿಸುವಂತೆ ನಾಲ್ಕು ಪ್ರಶ್ನೆಗಳನ್ನು ಕೇಳಿದ್ದಾರೆ.

1. ಪುಷ್ಕರ ಸ್ನಾನ, ರಥೋತ್ಸವ, ಹಬ್ಬ ಹರಿದಿನಗಳಲ್ಲಿ, ಗೂಳಿ ಕಾಳಗದಲ್ಲಿ ಭಕ್ತರು ಸತ್ತರೆ ದೇವರನ್ನು ಬಂಧಿಸುತ್ತೀರಾ ?

2. ಚುನಾವಣಾ ಪ್ರಚಾರದ ಕಾಲ್ತುಳಿತದಲ್ಲಿ ಯಾರಾದರೂ ಪ್ರಾಣ ಕಳೆದುಕೊಂಡರೆ ರಾಜಕಾರಣಿಗಳನ್ನು ಬಂಧಿಸುತ್ತೀರಾ ?

3. ಪ್ರೀ ರಿಲೀಸ್ ಫಂಕ್ಷನ್ ಗಳಲ್ಲಿ ಯಾರಾದರೂ ಸತ್ತರೆ ನಾಯಕ, ನಾಯಕಿಯರನ್ನು ಬಂಧಿಸುತ್ತೀರಾ ?

4. ಭದ್ರತಾ ವ್ಯವಸ್ಥೆಗಳನ್ನು ಪೊಲೀಸರು, ಆಯೋಜಕರು ಹೊರತುಪಡಿಸಿ ಚಲನಚಿತ್ರ ನಾಯಕರು ಮತ್ತು ಸಾರ್ವಜನಿಕ ಮುಖಂಡರು ಹೇಗೆ ನಿಯಂತ್ರಿಸುತ್ತಾರೆ ?’ ಎಂದು ರಾಮ್ ಗೋಪಾಲ್ ವರ್ಮಾ ಪೊಲೀಸರನ್ನು ಪ್ರಶ್ನಿಸಿದ್ದಾರೆ.

ಇದೀಗ ಈ ಟ್ವೀಟ್ ವೈರಲ್ ಆಗಿದೆ. ಅಲ್ಲು ಅರ್ಜುನ್ ಅಭಿಮಾನಿಗಳು RGV ಅವರ ಪೋಸ್ಟ್ ಅನ್ನು ವಿಪರೀತವಾಗಿ ಶೇರ್ ಮಾಡುತ್ತಿದ್ದಾರೆ. ಮತ್ತು ಅದು ಸಾಕಷ್ಟು ವೈರಲ್ ಆಗುತ್ತಿದೆ.

ಅದಕ್ಕೂ ಮುನ್ನ ಹಲವು ನಾಯಕರು, ನಿರ್ದೇಶಕರು, ನಿರ್ಮಾಪಕರು ಅಲ್ಲು ಅರ್ಜುನ್ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಭೋಲಾ ಶಂಕರ್ ನಿರ್ದೇಶಕ ಮೆಹರ್ ರಮೇಶ್ ಪ್ರತಿಕ್ರಿಯಿಸಿ.. ‘ಅಲ್ಲು ಅರ್ಜುನ್ ಬಂಧನವನ್ನು ನಾವು ಖಂಡಿಸುತ್ತೇವೆ. ನಾವು ಅವರ ಪರವಾಗಿ ನಿಲ್ಲುತ್ತೇವೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಆದಿ ಸಾಯಿ ಕುಮಾರ್ ಪ್ರತಿಕ್ರಿಯಿಸಿ.. ‘ಘಟನೆ ದುರದೃಷ್ಟಕರ.. ಆದರೆ ಇದಕ್ಕೆ ಒಬ್ಬ ವ್ಯಕ್ತಿಯನ್ನು ಹೊಣೆ ಮಾಡಿರುವುದು ಬೇಸರ ತಂದಿದೆ. ಅಲ್ಲು ಅರ್ಜುನ್ ಜೊತೆ ನಾವಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ. ಕಾಲ್ತುಳಿತಕ್ಕೆ ಪ್ರತಿಯೊಬ್ಬರೂ ಹೇಗೆ ಹೊಣೆಯಾಗುತ್ತಾರೆ ಎಂದು ಸಂದೀಪ್ ಕಿಶನ್ ಪ್ರಶ್ನಿಸಿದ್ದಾರೆ. ಲವ್ ಯು ಅಲ್ಲು ಅರ್ಜುನ್ ಅಣ್ಣ ಎಂದು ಸಂದೀಪ್ ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment