Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಡೆಂಗ್ಯೂನಿಂದ ಈಗಾಗಲೇ 6 ಸಾವು : ಇನ್ನೂ ಏರಲಿದೆ ಅಂದ್ರು ಆರೋಗ್ಯ ಸಚಿವರು..!

---Advertisement---

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಅದರಲ್ಲೂ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ. ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಡೆಂಗ್ಯೂ ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

 

ಸೆಪ್ಟೆಂಬರ್ ತಿಂಗಳಲ್ಲಿ ಡೆಂಗ್ಯೂ ಇನ್ನು ಏರಿಕೆಯಾಗುವ ಸಾಧ್ಯತೆ ಇದೆ‌ ಎಂದು ದಿನೇಶ್ ಗುಂಡೂರಾವ್ ಆತಂಕ ಹುಟ್ಟಿಸಿದ್ದಾರೆ. ಡೆಂಗ್ಯೂ ಕಳೆದ ವರ್ಷಕ್ಕಿಂತ ಈ ವರ್ಷ ದುಪ್ಪಟ್ಟಾಗಿದೆ. ಇಲ್ಲಿಯವರೆಗೂ ರಾಜ್ಯದಲ್ಲಿ 6187 ಪ್ರಕರಣ ದಾಖಲಾಗಿದೆ. 6 ಜನ ಸತ್ತಿದ್ದಾರೆ. ಇದರಲ್ಲಿ ಬಿಪಿ, ಶುಗರ್, ಹೃದಯ ಕಾಯಿಲೆ ಇರುವವರೇ ಮೂರು ಜನ ಸತ್ತಿದ್ದಾರೆ. ಸದಾ ಮಳೆಯಾಗುತ್ತಿದ್ದರೆ ಡೆಂಗ್ಯೂ ಪ್ರಕರಣಗಳು ಹುಟ್ಟಿಕೊಳ್ಳುವುದಿಲ್ಲ. ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಕಾರಣ ಡೆಂಗ್ಯೂ ಸೊಳ್ಳೆಗಳ ಉತ್ಪತ್ತಿಯಾಗುತ್ತಿದೆ. ಹವಮಾನ ಬದಲಾವಣೆಯಿಂದಾಗಿ ಡೆಂಗ್ಯೂ ಪ್ರಕತಣಗಳು ಹೆಚ್ಚಾಗುತ್ತಿವೆ.

ಸೆಪ್ಟೆಂಬರ್ ನಲ್ಲಿ ಇನ್ನಷ್ಟು ಹೆಚ್ಚಾಗಬಹುದು. ಮುಖ್ಯಮಂತ್ರಿಗಳು ಮುಂಜಾಗ್ರತ ಕ್ರಮಕ್ಕೆ ಸೂಚಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ ಗಳನ್ನು ಇರಿಸಲಾಗಿದೆ. ಡೆಂಗ್ಯುವಿಗೆ ನಿರ್ದಿಷ್ಟವಾದ ಚಿಕಿತ್ಸೆ ಇಲ್ಲ. ಆದರೆ ಪ್ಲೇಟ್ ಲೇಟ್ಸ್ ಕೊಡುವ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ಈಗಾಗಲೇ ಬ್ಲೆಡ್ ಯೂನಿಟ್ ಗಳ ಜೊತೆಗೆ ಮಾತುಕತೆ ಮಾಡಿದ್ದೇವೆ. ಖಾಸಗಿ ಆಸ್ಪತ್ರೆಗಳು ಡೆಂಗ್ಯೂ ರಿಪೋರ್ಟ್ ಮಾಡ್ತಿಲ್ಲ. ಖಾಸಗಿ ಆಸ್ಪತ್ರೆಗಳಿಗೆ ತಿಳಿಸಿದ್ದೇವೆ. ಡೆಂಗ್ಯೂ ರಿಪೋರ್ಟ್ ಮಾಡುವುದು ಕಡ್ಡಾಯವಾಗಿದೆ. ನಮ್ಮ ವೆಬ್ಸೈಟ ನಲ್ಲಿ ಡೆಂಗ್ಯೂ ಬುಲೆಟಿನ್ ಅಪ್ಡೇಟ್ ಮಾಡುತ್ತೇವೆ. ರಾಜ್ಯಾದ್ಯಂತ ಡೆಂಗ್ಯೂ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...