ಹೇಳಿ ಕೇಳಿ ಅಂಬರೀಶ್ ಅವರು ಹುಟ್ಟಿ ಬೆಳೆದ ಊರು ಮಂಡ್ಯ ಜಿಲ್ಲೆ. ಅಂಬರೀಶ್ ಮೇಲಿನ ಅಭಿಮಾನದಿಂದ ಮಂಡ್ಯದ ಜನತೆ ಸುಮಲತಾ ಅವರ ಕೈಹಿಡಿದಿದ್ದಾರೆ. ಸಂಸದೆಯನ್ನಾಗಿ ಆಯ್ಕೆ ಮಾಡಿದ್ದಾರೆ. ಇದೀಗ ರೆಬಲ್ ಸ್ಟಾರ್ ಅಂಬರೀಶ್ ಹಾಗೂ ಸುಮಲತಾ ಅವರ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಮದುವೆ ನಡೆಯುತ್ತಿದೆ, ಮಂಡ್ಯದಲ್ಲಿಯೇ ಬೀಗರ ಊಟ ನೆರವೇರಲಿದೆ.
ಸೆಲೆಬ್ರೆಟಿಗಳ ಫೇಮಸ್ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ್ಪ ಅವರ ಮಗಳು ಅವಿವಾ ಬಿಡಪ್ಪ ಮತಚತು ಅಭಿಷೇಕ್ ಅಂಬರೀಶ್ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅರಮನೆ ಮೈದಾನದಲ್ಲಿ ಮದುವೆ ನಡೆಯಲಿದೆ. ಜೂನ್ 7ರಂದು ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಆದರೆ ಜೂನ್ 17ಕ್ಕೆ ಮಂಡ್ಯದಲ್ಲಿ ಬೀಗರ ಔತಣಕೂಟ ನಡೆಯಲಿದೆ. ಎಲ್ಲಾ ಅಭಿಮಾನಿಗಳಿಗೆ ಆಹ್ವಾನ ನೀಡಲಾಗಿದೆ. ನವದಂಪತಿಯನ್ನು ಕಣ್ತುಂಬಿಕೊಂಡು, ಬೀಗರ ಔತಣಕೂಟ ಸವಿದು, ಹಾರೈಸಲು ಹೋಗಬಹುದು.
ಇನ್ನು ಅವಿವಾ ಬಿಡಪ ಅವರನ್ನು ಅಭಿಷೇಕ್ ಅಂಬರೀಶ್ ಅವರು ಒಂದು ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು.4-5 ವರ್ಷ ಡೇಟಿಂಗ್ ನಲ್ಲಿದ್ದ ಜೋಡಿ ಇತ್ತಿಚೆಗೆ ನಿಶ್ಚಿತಾರ್ಥ ಮಾಡಿಕೊಂಡು, ಈಗ ಮದುವೆಯಾಗುತ್ತಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…