Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಕಲಚೇತನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡಲು ಸದಾ ಸಿದ್ದ : ಶಾಸಕ ಕೆ.ಸಿ. ವೀರೇಂದ್ರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ, ಭೀಮಸಮುದ್ರ,
ಮೊ :  98808 36505

ಚಿತ್ರದುರ್ಗ : ವಿಕಲಚೇತನರು ಸ್ವಾವಲಂಬಿಯಾಗಿ  ಬದುಕು ಕಟ್ಟಿಕೊಳ್ಳಬೇಕು. ಮನೆಯವರಿಗೆ ಹೊರೆಯಾಗದಂತೆ ಅವರವರ ಕಾಲ ಮೇಲೆ ನಿಂತುಕೊಂಡು ಅವರು ದುಡಿಯುತ್ತೇನೆ ಎಂಬ ನಂಬಿಕೆ ಬರಬೇಕು ಎಂದು ಶಾಸಕ ವೀರೇಂದ್ರ ತಿಳಿಸಿದರು.

ಅವರು ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ  ಕೇಂದ್ರಉದ್ಘಾಟನೆ ಮಾಡಿ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಗವಿಕಲರಿಗೆ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರ ಸಹಕಾರವಾಗುತ್ತದೆ. ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ಜನ ಅಂಗವಿಕಲರಿದ್ದು ಇವರು ಯಾರಿಗೂ ಹೊರೆಯಾಗದಂತೆ ಸ್ವಾವಲಂಬಿಯಾಗಿ ಜೀವನ ಮಾಡಲು ಈ ಕೇಂದ್ರವನ್ನು ತೆರೆದಿದ್ದೇವೆ.

ಈ ಕೇಂದ್ರದಲ್ಲಿ ಟೈಲರಿಂಗ್ ತರಬೇತಿ, ಕಂಪ್ಯೂಟರ್ ಶಿಕ್ಷಣ ಹಾಗೂ ಅವರಿಗೆ ಬೇಕಾದ ಬ್ಯಾಂಕಿನ ಸಾಲ ಸೌಲಭ್ಯಗಳನ್ನು ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲೂಕಿನ ಸುಮಾರು 23 ಗ್ರಾಮ ಪಂಚಾಯಿತಿಗಳಲ್ಲಿ, ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತೇವೆ. ಅದಕ್ಕೆ ಬೇಕಾದ ಹಣವನ್ನು ಶಾಸಕರ ನಿಧಿಯಿಂದ ಕೊಡುತ್ತೇವೆ. ಸುಮಾರು ಐದು ಲಕ್ಷದಿಂದ 10 ಲಕ್ಷದವರೆಗೆ ಹಣ ನೀಡುತ್ತೇವೆ.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ‌ಎಂ.ನಯನ್ ಕುಮಾರ್, ಆರ್. ರವಿಕುಮಾರ್, ಹೆಚ್.ಎಂ. ಕಲ್ಲೇಶ್ ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ಚಾಕಲೇಟ್ ಕೊಡಿಸಿ ಅನ್ಯಕೋಮಿನ ಯುವಕನಿಂದ ದಲಿತ ಬಾಲಕಿ ಮೇಲೆ ಅತ್ಯಾಚಾರ: ಹಿರಿಯೂರಿನಲ್ಲಿ ತಡವಾಗಿ ಬೆಳಕಿಗೆ ಬಂದ ಪ್ರಕರಣ..!

ಹಿರಿಯೂರು : ತಂಗಿಯ ಸ್ನೇಹಿತೆಗೆ ಚಾಕಲೇಟ್, ಬಿಸ್ಕೇಟ್ ಕೊಡಿಸಿ, ಅನ್ಯಕೋಮಿನ ಯುವಕ ದಲಿತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಹಿರಿಯೂರಿನಲ್ಲಿ ನಡೆದಿದೆ. ಈ ಸಂಬಂಧ ಅನ್ಯಕೋಮಿನ ಯುವಕನ ವಿರುದ್ಧ ಗ್ರಾಮಾಂತರ ಪೋಲಿಸ್

error: Content is protected !!