Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿಕಲಚೇತನರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡಲು ಸದಾ ಸಿದ್ದ : ಶಾಸಕ ಕೆ.ಸಿ. ವೀರೇಂದ್ರ

---Advertisement---

 

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ, ಭೀಮಸಮುದ್ರ,
ಮೊ :  98808 36505

ಚಿತ್ರದುರ್ಗ : ವಿಕಲಚೇತನರು ಸ್ವಾವಲಂಬಿಯಾಗಿ  ಬದುಕು ಕಟ್ಟಿಕೊಳ್ಳಬೇಕು. ಮನೆಯವರಿಗೆ ಹೊರೆಯಾಗದಂತೆ ಅವರವರ ಕಾಲ ಮೇಲೆ ನಿಂತುಕೊಂಡು ಅವರು ದುಡಿಯುತ್ತೇನೆ ಎಂಬ ನಂಬಿಕೆ ಬರಬೇಕು ಎಂದು ಶಾಸಕ ವೀರೇಂದ್ರ ತಿಳಿಸಿದರು.

ಅವರು ತಾಲ್ಲೂಕಿನ ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ  ಕೇಂದ್ರಉದ್ಘಾಟನೆ ಮಾಡಿ ಮಾತನಾಡಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಅಂಗವಿಕಲರಿಗೆ ವಿಕಲಚೇತನ ಕ್ಷೇಮಾಭಿವೃದ್ಧಿ ಹಾಗೂ ಕೌಶಲ್ಯ ಅಭಿವೃದ್ಧಿ ಕೇಂದ್ರ ಸಹಕಾರವಾಗುತ್ತದೆ. ಹುಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ಸುಮಾರು 23 ಜನ ಅಂಗವಿಕಲರಿದ್ದು ಇವರು ಯಾರಿಗೂ ಹೊರೆಯಾಗದಂತೆ ಸ್ವಾವಲಂಬಿಯಾಗಿ ಜೀವನ ಮಾಡಲು ಈ ಕೇಂದ್ರವನ್ನು ತೆರೆದಿದ್ದೇವೆ.

ಈ ಕೇಂದ್ರದಲ್ಲಿ ಟೈಲರಿಂಗ್ ತರಬೇತಿ, ಕಂಪ್ಯೂಟರ್ ಶಿಕ್ಷಣ ಹಾಗೂ ಅವರಿಗೆ ಬೇಕಾದ ಬ್ಯಾಂಕಿನ ಸಾಲ ಸೌಲಭ್ಯಗಳನ್ನು ಒದಗಿಸಲು ಈ ಕೇಂದ್ರ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಚಿತ್ರದುರ್ಗ ತಾಲೂಕಿನ ಸುಮಾರು 23 ಗ್ರಾಮ ಪಂಚಾಯಿತಿಗಳಲ್ಲಿ, ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಂತಹ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತೇವೆ. ಅದಕ್ಕೆ ಬೇಕಾದ ಹಣವನ್ನು ಶಾಸಕರ ನಿಧಿಯಿಂದ ಕೊಡುತ್ತೇವೆ. ಸುಮಾರು ಐದು ಲಕ್ಷದಿಂದ 10 ಲಕ್ಷದವರೆಗೆ ಹಣ ನೀಡುತ್ತೇವೆ.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ‌ಎಂ.ನಯನ್ ಕುಮಾರ್, ಆರ್. ರವಿಕುಮಾರ್, ಹೆಚ್.ಎಂ. ಕಲ್ಲೇಶ್ ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment