ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಮಳೆ ಉತ್ತಮವಾಗಿದ್ದರೆ, ಕಾವೇರಿ ಕೊಳ್ಳಗಳು ಸಂಪೂರ್ಣವಾಗಿ ತುಂಬುತ್ತಿತ್ತು. ಆಗ ವರ್ಷಪೂರ್ತಿ ರೈತರಿಗೆ, ಕುಡಿಯುವ ನೀರಿಗೆ ಆತಂಕ ಎದುರಾಗುತ್ತಿರಲಿಲ್ಲ. ಆದರೆ ಮಳೆ ಇಲ್ಲದೆ ಬೆಳೆಗೂ ನೀರಿಲ್ಲ, ಕುಡಿಯುವುದಕ್ಕೂ ನೀರು ಸಾಲಲ್ಲ ಎಂಬ ಭಯ ರಾಜ್ಯದ ಜನರಲ್ಲಿದೆ. ಇದರ ನಡುವೆಯೇ ತಮಿಳುನಾಡಿಗೆ ನೀರು ಹರಿಯುತ್ತಲೆ ಇದೆ. ಈ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಸಿಗಬೇಕು ಅಂದ್ರೆ ಮಳೆ ಬರಲೇಬೇಕು.
ಮಂಡ್ಯದ ಗಂಡು ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮಳೆಗಾಗಿ ಕಾವೇರಿ ತಾಯಿಯನ್ನು ಪ್ರಾರ್ಥಿಸಿದ್ದಾರೆ. ಇಂದು ತಲಕಾವೇರಿಯಲ್ಲಿರುವ ಕಾವೇರಿಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿಯ ಉಗಮ ಸ್ಥಾನಕ್ಕೆ ತನ್ನ ಪತ್ನಿಯೊಂದಿಗೆ ತೆರಳಿ, ವಿಶೇಷ ಪೂಜೆ ನೆರವೇರಿಸಿ, ಮಳೆಗಾಗಿ ಪ್ರಾರ್ಥಿಸಿದ್ದಾರೆ.
ಸುಮಲತಾ ಅಂಬರೀಶ್ ಈ ಫೋಟೋಗಳನ್ನು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಕಾವೇರಿ ಉಗಮ ಸ್ಥಳ ತಲಕಾಡಿನಲ್ಲಿ ಇಂದು ಅಭಿಷೇಕ್ ಅಂಬರೀಶ್, ಅವಿವಾ ಅಭಿಷೇಕ್ ಅವರೊಂದಿಗೆ ತಾಯಿ ಕಾವೇರಿಗೆ ಪೂಜೆ ಸಲ್ಲಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು ಎಂದು ಟ್ವೀಟ್ ಮಾಡಿದ್ದಾರೆ. ಇದಕ್ಕೆ ಹಲವರು ಕಮೆಂಟ್ ಮಾಡಿ, ಅದು ತಲಕಾಡು ಅಲ್ಲ ತಲಕಾವೇರಿ ಎಂದು ತಿದ್ದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್