Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಂವಿಧಾನ ಬದ್ಧ ಹಕ್ಕುಗಳಿಗಾಗಿ ಶ್ರಮಿಸಿದ ಮಹಾನ್ ಚೇತನ ಅಂಬೇಡ್ಕರ್ : ಕೆ. ಮಂಜುನಾಥ್

Facebook
Twitter
Telegram
WhatsApp

ಚಿತ್ರದುರ್ಗ : ಸಂಘಟನೆಯಲ್ಲಿ ನೌಕರರು ತಮ್ಮ ಪಾಲಿನ ನ್ಯಾಯಬದ್ಧ ಸೌಲಭ್ಯಗಳನ್ನು , ಹಕ್ಕುಗಳನ್ನು, ಪಡೆಯಲು ಸಂವಿಧಾನವೇ ಮೂಲ ಆಧಾರ ಎಂದು ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್ ಹೇಳಿದರು.

ನಗರದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಲ್ಲಿ ಅಂಬೇಡ್ಕರ್ ಅವರ 131ನೇ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೊಳಗಾದವರ ಪರವಾಗಿ ನ್ಯಾಯಯುತ ಹಕ್ಕುಗಳಿಗಾಗಿ ಹೋರಾಟ ಮಾಡಿ ಸಂವಿಧಾನ ಬದ್ಧವಾದ ಹಕ್ಕುಗಳನ್ನು ಕೊಡಿಸುವಲ್ಲಿ ಶ್ರಮಿಸಿದ ಮಹಾನ್ ಚೇತನ ಅಂಬೇಡ್ಕರ್ ಎಂದರು.

ಡಾ. ಬಿ.ಆರ್. ಅಂಬೇಡ್ಕರ್‌ ಅವರ ಆಶಯದಂತೆ ದೇಶದ ಎಲ್ಲಾ ಜನರಿಗೆ ಉಚಿತ ಶಿಕ್ಷಣ ಉಚಿತ ಆರೋಗ್ಯ ಸೌಲಭ್ಯಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಶೋಷಿತರಿಗೆ ದಲಿತರಿಗೆ ದೊರಕುವಂತಾಗಬೇಕು.

ಕೆಲವೇ ಕೆಲವು ಸಮುದಾಯಗಳಿಗೆ ಸೀಮಿತವಾಗಿದ್ದ ಶಿಕ್ಷಣವನ್ನು ಪ್ರತಿಯೊಬ್ಬರಿಗೂ ಸಂವಿಧಾನದ ಮೂಲಕ ಸಂವಿಧಾನಬದ್ಧವಾಗಿ ನೀಡುವ ಮೂಲಕ ಪ್ರತಿಯೊಬ್ಬರಲ್ಲಿಯೂ ಪ್ರಶ್ನಿಸುವ ಹಕ್ಕನ್ನು ಜಾಗೃತಿ ಗೊಳಿಸಿದ ಮಹಾನಾಯಕ ಎಂದು ಹೇಳಿದರು.

ಉಪಾಧ್ಯಕ್ಷ ವೀರಣ್ಣ ಮಾತನಾಡಿ ಸಂವಿಧಾನದ ರಚನೆ, ಅವರ ಸಾಧನೆಗಳು ತುಳಿತಕ್ಕೊಳಗಾದವರ ಪರವಾಗಿ ಮಾಡಿದ ಚಿಂತನೆಗಳು ಹೋರಾಟಗಳ ಬಗ್ಗೆ ಸವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರದೀಪ್ ಕುಮಾರ್ ಜಿ. ಆರ್, ಹಿರಿಯ ಉಪಾಧ್ಯಕ್ಷ ಶಿವಮೂರ್ತಿ, ರಾಘವೇಂದ್ರ, ಖಾಜಾಹುಸೇನ್,  ಸಹ ಕಾರ್ಯದರ್ಶಿ ತಾಜಿರ್ , ಗವಿಸಿದ್ದೇಶ್, ಗುರುಮೂರ್ತಿ, ಚಂದ್ರನಾಯಕ್,  ರಾಘವೇಂದ್ರ ತಿರುಮಲೇಶ್
ಹುಲಿ ಕುಂಟಪ್ಪ ಗೀತಮ್ಮ, ಕಾಂತರಾಜು, ಹನುಮಂತಪ್ಪ ,ರಾಜಪ್ಪ, ಕೃಷ್ಣಪ್ಪ, ವಡಕಲ್ ತಿಮ್ಮಣ್ಣ, ನಾಮನಿರ್ದೇಶಿತ ಸದಸ್ಯರು ನೌಕರರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!