ಅಂಬೇಡ್ಕರ್ ಜಯಂತಿ : ಅದ್ದೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಸಿದ್ಧತೆ

ಚಿತ್ರದುರ್ಗ.ಎಪ್ರಿಲ್.01: ಮುಂಬರುವ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ ಮಟ್ಟದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಿಲು ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ ಕುರಿತು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

 

ಜಿಲ್ಲಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿ ತಪ್ಪದೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಜಯಂತಿ ಅಂಗವಾಗಿ ಕನಕ ವೃತ್ತದಿಂದ ತರಾಸು ರಂಗಮಂದಿರದವರೆಗೆ ಸ್ತಬ್ದಚಿತ್ರ ಹಾಗೂ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ, ಕೃಷಿ, ತೋಟಗಾರಿಕೆ, ಶಿಕ್ಷಣ, ಅರಣ್ಯ, ಆರೋಗ್ಯ ಇಲಾಖೆ ಸೇರಿದಂತೆ 10 ಹೆಚ್ಚು ಇಲಾಖೆಗಳು ಸರ್ಕಾರದ ಯೋಜನೆಗಳ ಮಹತ್ವ ಸಾರುವ ಆಕರ್ಷಕ ಸ್ತಬ್ದಚಿತ್ರಗಳನ್ನು ರಚಿಸಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಎಲ್ಲಾ ತಾಲ್ಲೂಕುಗಳಿಂದಲೂ ವೈವಿದ್ಯಮಯವಾದ ಕಲಾತಂಡಗಳನ್ನು ಕರೆತಂದ ಮೆರವಣಿಗೆಯಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

 

ನಗರ ಪ್ರಮುಖ ರಸ್ತೆ ಹಾಗೂ ವೃತ್ತಗಳಿಗೆ ಅಲಂಕಾರ:
ಅಂಬೇಡ್ಕರ್ ಜಯಂತಿಯAದು ನಗರದ ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಿಗೆ ನಗರ ಸಭೆಯಿಂದ ಅಲಂಕಾರ ಮಾಡಬೇಕು. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಟ್ರಾಕ್ಟರ್ ಅಲಂಕರಿಸಬೇಕು. ತರಾಸು ರಂಗಮಂದಿರದಲ್ಲಿನ ವೇದಿಕೆ ಕಾರ್ಯಕ್ರಮದಲ್ಲಿಯೂ ಅಗತ್ಯ ಸಿದ್ದತೆ ಕೈಗೊಳ್ಳಬೇಕು. ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ಪ್ರತಿ ತಾಲ್ಲೂಕಿನಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭ್ಯುದ್ಯಯಕ್ಕೆ ಶ್ರಮಿಸಿದ 2 ಸಂಘ ಸಂಸ್ಥೆಗಳನ್ನು ಗುರುತಿಸಿ ಸನ್ಮಾಸಿಸಲು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಎಸ್.ಎಸ್.ಎಲ್.ಸಿಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೂ ಸನ್ಮಾನಿಸಬೇಕು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಹ್ವಾನ ಪತ್ರಿಕೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತನಿಧಿಗಳು, ಸಂಘ ಸಂಸ್ಥೆಗಳಿಗೆ ವಿತರಿಸಿ ಜಯಂತಿಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬೇಕು ಎಂದರು.

 

ಸಭೆಯಲ್ಲಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

suddionenews

Recent Posts

ಪಿತ್ತ ಬೇಗ ಕಡಿಮೆ ಆಗ್ಬೇಕು ಅಂದ್ರೆ ಹೀಗೆ ಮಾಡಿ

ಸಾಕಷ್ಟು ಜನರಿಗೆ ಪಿತ್ತದ ಸಮಸ್ಯೆ ಇರುತ್ತದೆ.‌ ಪಿತ್ತ ಜಾಸ್ತಿಯಾದಷ್ಟು ಮನುಷ್ಯನಿಗೆ ಕಂಫರ್ಟಬಲ್ ಇರುವುದೇ ಇಲ್ಲ. ಪಿತ್ತ ಹೆಚ್ಚಾದರೆ ತಲೆ ಸುತ್ತು…

5 hours ago

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ

ಈ ರಾಶಿಯ ಮಠದ ಸಾರಥ್ಯ ಹೊಂದಿದವರಿಗೆ ತೊಂದರೆ, ಈ ರಾಶಿಯ ಗಂಡ ಹೆಂಡತಿ ಎಷ್ಟುಚೆನ್ನಾಗಿದ್ದರೆ ಗೊತ್ತು, ಶನಿವಾರದ ರಾಶಿ ಭವಿಷ್ಯ…

6 hours ago

ದೇಶದ ಮೊದಲ ಹಿಂದೂ ಗ್ರಾಮಕ್ಕೆ ಶಂಕುಸ್ಥಾಪನೆ : ಈ ಗ್ರಾಮದ ವಿಶೇಷತೆ ಏನು ಗೊತ್ತಾ ?

  ಸುದ್ದಿಒನ್ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿರುವ ಬಾಗೇಶ್ವರ ಧಾಮ ಪೀಠದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಏಪ್ರಿಲ್ 2 ರಂದು…

14 hours ago

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ; ಕಾರಣವೇನು..?

ಅಣ್ಣಾಮಲೈ ಅಂದ್ರೆನೇ ಅದೆಷ್ಟೋ ಜನ ಗಢಗಢ ಅಂತ ನಡುಗುತ್ತಾ ಇದ್ದರು. ಕರ್ನಾಟಕದ ರಿಯಲ್ ಸಿಂಗಂ ಆಗಿ ಘರ್ಜಿಸಿದ್ದರು. ಆದರೆ ಬಿಜೆಪಿಗೆ…

14 hours ago

ಚಿನ್ನ – ಬೆಳ್ಳಿ ಬೆಲೆ ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ಇಳಿಕೆ ; ಕಾರಣವೇನು..? ಅಕ್ಷಯ ತೃತೀಯ ತನಕವೂ ಇಳಿಯಲಿದೆಯಾ..?

  ಚಿನ್ನ ಬೆಳ್ಳಿ ದರ ಏರಿಕೆಯತ್ತಲೇ ಸಾಗುತ್ತಿತ್ತು. ಇಂದು ಮಹಿಳೆಯರ ಚಿನ್ನದ ಕನಸಿಗೆ ಬೇಸರವನ್ನೇ ತಂದಿತ್ತು. ಇದೀಗ ದಿಢೀರನೇ ಚಿನ್ನ…

16 hours ago

ಸೃಜನಶೀಲ ಯುವ ಬರಹಗಾರರಿಗೆ ಆರ್ಥಿಕ ನೆರವು ನೀಡಿ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 04…

17 hours ago