Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ಅಂಬೇಡ್ಕರ್ 135ನೇ ಜಯಂತಿ: ಸಂವಿಧಾನ ಅರಿವು, ಶಿಕ್ಷಣದ ಮಹತ್ವದ ಸಂದೇಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 : ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಪ್ರವಾಸಿ ಮಂದಿರದಲ್ಲಿ ಸೋಮವಾರ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ 135 ನೇ ಜಯಂತಿ ಆಚರಿಸಲಾಯಿತು.

 

ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತ ಸಂವಿಧಾನವನ್ನು ಮೊದಲು ಎಲ್ಲರೂ ತಿಳಿದುಕೊಂಡಾಗ ಕಾನೂನಿನ ಅರಿವು ಮೂಡುತ್ತದೆ. ರಾಜ ಮಹಾರಾಜರು, ಪುರಾತನ ಕಾಲದಿಂದಲೂ ಕಾನೂನಿದೆ. ಸಮಾನತೆ, ಹಕ್ಕು ಮತ್ತು ಕರ್ತವ್ಯವನ್ನು ಸಂವಿಧಾನದಲ್ಲಿ ಉಲ್ಲೇಖಿಸಲಾಗಿದೆ. ಕೊಳಗೇರಿ ನಿವಾಸಿಗಳು ಬಡತನವನ್ನು ಮುಂದಿಟ್ಟುಕೊಂಡು ಮಕ್ಕಳನ್ನು ಶಿಕ್ಷಣದಿಂದ ವಂಚಿಸಬಾರದು. ಸಂವಿಧಾನದಡಿ ಸಿಗುವ ಹಕ್ಕುಗಳನ್ನು ಬಳಸಿಕೊಳ್ಳಬೇಕಾದರೆ ಸರ್ಕಾರದ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ತಿಳಿಸಿದರು.

 

ಬಾಲ್ಯದಲ್ಲಿಯೇ ಸಾಕಷ್ಟು ಹಿಂಸೆ, ನೋವು, ಅವಮಾನ, ಅಸ್ಪøಶ್ಯತೆಯನ್ನು ಅನುಭವಿಸಿದ ಡಾ.ಬಿ.ಆರ್.ಅಂಬೇಡ್ಕರ್ ಹಿಂದೂ ಧರ್ಮವನ್ನು ತೊರೆದು ಬೌದ್ದ ಧರ್ಮಕ್ಕೆ ಸೇರ್ಪಡೆಯಾದರು. ಅತ್ಯಂತ ಬಲಿಷ್ಟವಾದ ಸಂವಿಧಾನವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತವನ್ನು ನರಕವೆಂದು ಹೇಳಿ ಅಮಾನಿಸಿರುವುದನ್ನು ಯಾರು ಖಂಡಿಸುತ್ತಿಲ್ಲದಿರುವುದು ನೋವಿನ ಸಂಗತಿ. ಸಾವಿರಾರು ಜಾತಿ ಧರ್ಮಗಳಿರುವ ಭಾರತದಲ್ಲಿ ಎಲ್ಲರೂ ಸಹೋದರತ್ವದಿಂದ ಬದುಕುತ್ತಿದ್ದಾರೆ. ನಮ್ಮ ದೇಶದ ಬಗ್ಗೆ ಹಗುರುವಾಗಿ ಮಾತನಾಡುವ ಟ್ರಂಪ್‍ಗೆ ಪ್ರಧಾನಿ ಮೋದಿರವರು ತಕ್ಕ ಉತ್ತರ ಕೊಡಬೇಕೆಂದು ಮನವಿ ಮಾಡಿದರು.

 

ಕೆಕೆಎನ್‍ಎಸ್‍ಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ್‍ರವರು ಸಂವಿಧಾನದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಪ್ರತಿಯೊಬ್ಬ ಪ್ರಜೆಗೂ ಸಮಾನತೆಯನ್ನು ನೀಡಿದ್ದಾರೆ. ಸಂವಿಧಾನದಡಿಯಲ್ಲಿ ಸಿಗುವ ಸೌಲಭ್ಯಗಳನ್ನು ಬಳಸಿಕೊಂಡು ಕೊಳಗೇರಿ ನಿವಾಸಿಗಳು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ಕೊಡಿಸಿದಾಗ ಮಾತ್ರ ಸಂವಿಧಾನದ ಆಶಯಗಳು ಈಡೇರುತ್ತವೆಂದರು.
ಎನ್.ರಂಗಸ್ವಾಮಿ, ಶಬಿನಾಜಾನ್, ಲೀಲಾವತಿ, ಚಂದ್ರಮ್ಮ, ರಜಿಯಾಬಿ, ಸರೋಜಮ್ಮ, ಗಂಗಮ್ಮ ಇನ್ನು ಮುಂತಾದವರು ಅಂಬೇಡ್ಕರ್ ಜಯಂತಿಯಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...