Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಫೆಬ್ರವರಿ 23 ರಿಂದ 25 ರವರೆಗೆ ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

Facebook
Twitter
Telegram
WhatsApp

ಸುದ್ದಿಒನ್, ಹೊಸದುರ್ಗ, ಫೆಬ್ರವರಿ.12 :  ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ  ಫೆಬ್ರವರಿ 23ರಿಂದ 25ರವರೆಗೆ 11ನೇ ವರ್ಷದ ದಕ್ಷಿಣಮ್ನಾಯ ಕ್ಷೇತ್ರದ ಅಂಭಾದೇವಿ ಮತ್ತು ತಿರುಪತಿ ವೆಂಕಟೇಶ್ವರ ಬ್ರಹ್ಮರಥೋತ್ಸವ ಜರುಗಲಿದೆ.

ಫೆಬ್ರವರಿ 23ರಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಹಾಗೂ ಸಂಜೆ 7ಕ್ಕೆ ಅಂಭಾದೇವಿ ಮತ್ತು ತಿರುಮಲ ಸ್ವಾಮಿಗೆ ಕಂಕಣಧಾರಣೆ ಜರುಗಲಿದೆ.

ಫೆಬ್ರವರಿ 24ರಂದು ಬೆಳಿಗ್ಗೆ 10.30ಕ್ಕೆ ಮಹಾಸಂಸ್ಥಾನ ಮಠದ ತಿಮ್ಮಪ್ಪ ಸ್ವಾಮೀಜಿಯಿಂದ ಗೋವರ್ಧನಗಿರಿ ಸಿಂಹಾಸನ ಪೀಠಾರೋಹಣ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಗೆ ದೇವಿಯ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ನಂತರ  ಗೋವರ್ಧನಗಿರಿ ಧರ್ಮದ ಬಾವುಟ ಹರಾಜು ಹಾಕಲಾಗುವುದು.

ಫೆಬ್ರವರಿ 25ರಂದು ಸಂಜೆ 4.30ಕ್ಕೆ ಕುಂಭೋತ್ಸವ ಆಚರಣೆಯೊಂದಿಗೆ ಜಾತ್ರೆ ಕೊನೆಗೊಳ್ಳಲಿದೆ. ಆಗಮಿಸುವ ಭಕ್ತರಿಗೆ ಮೂರು ದಿನವೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅಂಭಾದೇವಿಯ ದೇವಸ್ಥಾನ ಕಟ್ಟಡ ಕಾರ್ಯ ಆರಂಭವಾಗಿದ್ದು, ಸರ್ವ ಭಕ್ತರು ಕಟ್ಟಡ ನಿರ್ಮಾಣಕ್ಕೆ ತನು ಮನ ಧನ ಸಹಾಯದೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥಾನ ಮಠದ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!