Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಫೆಬ್ರವರಿ 23 ರಿಂದ 25 ರವರೆಗೆ ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

---Advertisement---

ಸುದ್ದಿಒನ್, ಹೊಸದುರ್ಗ, ಫೆಬ್ರವರಿ.12 :  ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ  ಫೆಬ್ರವರಿ 23ರಿಂದ 25ರವರೆಗೆ 11ನೇ ವರ್ಷದ ದಕ್ಷಿಣಮ್ನಾಯ ಕ್ಷೇತ್ರದ ಅಂಭಾದೇವಿ ಮತ್ತು ತಿರುಪತಿ ವೆಂಕಟೇಶ್ವರ ಬ್ರಹ್ಮರಥೋತ್ಸವ ಜರುಗಲಿದೆ.

ಫೆಬ್ರವರಿ 23ರಂದು ಬೆಳಿಗ್ಗೆ 7.30ಕ್ಕೆ ಧ್ವಜಾರೋಹಣ ಹಾಗೂ ಸಂಜೆ 7ಕ್ಕೆ ಅಂಭಾದೇವಿ ಮತ್ತು ತಿರುಮಲ ಸ್ವಾಮಿಗೆ ಕಂಕಣಧಾರಣೆ ಜರುಗಲಿದೆ.

ಫೆಬ್ರವರಿ 24ರಂದು ಬೆಳಿಗ್ಗೆ 10.30ಕ್ಕೆ ಮಹಾಸಂಸ್ಥಾನ ಮಠದ ತಿಮ್ಮಪ್ಪ ಸ್ವಾಮೀಜಿಯಿಂದ ಗೋವರ್ಧನಗಿರಿ ಸಿಂಹಾಸನ ಪೀಠಾರೋಹಣ ನಡೆಯಲಿದ್ದು, ಅದೇ ದಿನ ಸಂಜೆ 5ಗಂಟೆಗೆ ದೇವಿಯ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ನಂತರ  ಗೋವರ್ಧನಗಿರಿ ಧರ್ಮದ ಬಾವುಟ ಹರಾಜು ಹಾಕಲಾಗುವುದು.

ಫೆಬ್ರವರಿ 25ರಂದು ಸಂಜೆ 4.30ಕ್ಕೆ ಕುಂಭೋತ್ಸವ ಆಚರಣೆಯೊಂದಿಗೆ ಜಾತ್ರೆ ಕೊನೆಗೊಳ್ಳಲಿದೆ. ಆಗಮಿಸುವ ಭಕ್ತರಿಗೆ ಮೂರು ದಿನವೂ ಅನ್ನಸಂತರ್ಪಣೆ ಆಯೋಜಿಸಲಾಗಿದೆ. ಅಂಭಾದೇವಿಯ ದೇವಸ್ಥಾನ ಕಟ್ಟಡ ಕಾರ್ಯ ಆರಂಭವಾಗಿದ್ದು, ಸರ್ವ ಭಕ್ತರು ಕಟ್ಟಡ ನಿರ್ಮಾಣಕ್ಕೆ ತನು ಮನ ಧನ ಸಹಾಯದೊಂದಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಸ್ಥಾನ ಮಠದ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...