ಬೆಂಗಳೂರು; ರೆಬಲ್ ಸ್ಟಾರ್ ಅಂಬರೀಶ್ ಪುತ್ರನ ನಾಮಕರಣ ಇಂದು ಅದ್ದೂರಿಯಾಗಿ ನೆರವೇರಿದೆ. ಬೆಂಗಳೂರಿನ ಖಾಸಗಿ ಹೊಟೇಲ್ ನೆರವೇರಿದ್ದು, ಮೊಮ್ಮಗನಿಗೆ ತಾತನ ಹೆಸರನ್ನ ಇಡಲಾಗಿದೆ. ಅಭಿಷೇಕ್ ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಡಲಾಗಿದ್ದು, ಅ ಅಕ್ಷರವನ್ನೇ ಇಡುವ ಮೂಲಕ ವಂಶ ಪರಂಪರೆಯನ್ನು ಅನುಸರಿಸಿದ್ದಾರೆ.
ನಾಮಕರಣದ ಕಾರ್ಯಕ್ರಮದಲ್ಲಿ ಕುಟುಂಬಸ್ಥರು, ನೆಂಟರು, ಆಪ್ತ ಸ್ನೇಹಿತರು ಭಾಗವಹಿಸಿದ್ದರು. ಕುಚ್ಚ ಸುದೀಪ್ ಕೂಡ ಪತ್ನಿ ಪ್ರಿಯಾ ಜೊತೆಗೆ ಬಂದಿದ್ದು, ಮಗುವಿಗೆ ಉಡುಗೊರೆ ನೀಡಿ ಹಾರೈಸಿದ್ದಾರೆ. ಟೆಡ್ಡಿ ಬೇರ್ ಹಾಗೂ ಮೊಲ ಇರುವ ತೊಟ್ಟಿಲು ತರಹದ ಬುಟ್ಟಿಯನ್ನು ಗಿಫ್ಟ್ ಆಗಿ ನೀಡಿದ್ದಾರೆ. ಅಷ್ಟೇ ಅಲ್ಲ ಅನೇಕ ನಟ, ನಟಿಯರು, ರಾಜಕೀಯ ನಾಯಕರು ಆಗಮಿಸಿ, ಮಗುವಿಗೆ ಶುಭ ಹಾರೈಸಿದರು.
ಇನ್ನು ಮಗುವಿನ ನಾಮಕರಣಕ್ಕೆ ದರ್ಶನ್ ಬಂದೇ ಬರುತ್ತಾರೆ ಎಂಬ ನಿರೀಕ್ಷೆ ಇತ್ತು. ಯಾಕಂದ್ರೆ ಮದರ್ ಇಂಡಿಯಾ ಅಂತಾನೇ ಪ್ರೀತಿ ಇಟ್ಟುಕೊಂಡಿರೋ ಸುಮಲತಾ ಹಾಗೂ ದರ್ಶನ್ ನಡುವೆ ಎಲ್ಲವೂ ಸರಿ ಇಲ್ಲ ಎಂಬ ಚರ್ಚೆ ನಡೆದಿತ್ತು. ಸುಮಲತಾ ಅವರು ಇದಕ್ಕೆ ಸ್ಪಷ್ಟನೆ ಕೂಡ ನೀಡಿದ್ದರು. ಅಮ್ಮ ಮಗನ ಸಂಬಂಧ ಎಂಬುದು ಯಾವಾಗಲೂ ಒಂದೇ ಥರ ಇರುತ್ತದೆ. ಅದಕ್ಕೆ ಇನ್ನೇನೋ ಮಿಕ್ಸ್ ಮಾಡಬೇಡಿ ಎಂದಿದ್ದರು. ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅವರ ಗೆಲುವಿಗಾಗಿ ಯಶ್ ಹಾಗೂ ದರ್ಶನ್ ಸಾಕಷ್ಟು ಓಡಾಟ ನಡೆಸಿದ್ದರು. ಯಶ್ ಅವರು ತೊಟ್ಟಿಲು ಗಿಫ್ಟ್ ನೀಡಿದ್ದು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಇನ್ನು ದೊಡ್ಡ ಮಗ ಎಂದೇ ಹೇಳಿಕೊಳ್ಳುತ್ತಿದ್ದ ದರ್ಶನ್ ಗೈರಾಗಿದ್ದಾರೆ.
ಈ ರಾಶಿಯವರು ಹೊಸದಾಗಿ ವ್ಯಾಪಾರ ಪ್ರಾರಂಭ ಮಾಡಿದ್ದಾರೆ ಕೈಹಿಡಿದರೆ ಸಾಕು, ಈ ರಾಶಿಯವರು ಮದುವೆಯಾಗಿ ತಿಂಗಳಾಯಿತು ಕಲಹಗಳು ಶುರು, ಮಂಗಳವಾರದ…
ಹುಬ್ಬಳ್ಳಿ; ಜೈನ ಸಮುದಾಯದವರು ಸರ್ಕಾರಕ್ಕೆ ಒಂದಷ್ಟು ಬೇಡಿಕೆಗಳನ್ನ ಮುಂದಿಟ್ಟಿದ್ದಾರೆ. ಅದರಲ್ಲೂ ಜೈನ ನಿಗಮ ಸ್ಥಾಪನೆ ಮಾಡುವ ಬಗ್ಗೆ ಹೆಚ್ಚು ಒತ್ತು…
ಬೆಂಗಳೂರು; ಇಂದು ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ 50ನೇ ಹುಟ್ಟುಹಬ್ಬ. ಕುಟುಂಬಸ್ಥರು, ಆಪ್ತರು, ಅಭಿಮಾನಿಗಳೆಲ್ಲಾ ಸಮಾಧಿ ಬಳಿ ಹೋಗಿ…
ಚಿತ್ರದುರ್ಗ. ಮಾರ್ಚ್17: ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದು ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಹೇಳಿದರು. ನಗರದ…
ಚಿತ್ರದುರ್ಗ.ಮಾರ್ಚ್.17:ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…