Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮ್ಮುಕಾಶ್ಮೀರದಲ್ಲಿ ಹಿಂದೂಗಳ ದೇವಾಲಯವನ್ನು ಟಾರ್ಗೆಟ್ ಮಾಡ್ತಿದ್ದಾರಾ..?

Facebook
Twitter
Telegram
WhatsApp

ಶ್ರೀನಗರ: ಕಳೆದ ಕೆಲವು ತಿಂಗಳಿನಿಂದ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳು ಹಾಗೂ ಸರ್ಕಾರಿ ನೌಕರಿಯಲ್ಲಿರುವವರ ಹತ್ಯೆ ಹೆಚ್ಚಾಗುತ್ತಿದೆ. ಇದರಿಂದ ಆತಂಕಗೊಂಡಿರುವ ನೌಕರರು ನಮ್ಮನ್ನು ಸುರಕ್ಷತೆಯ ಜಾಗಕ್ಕೆ ವರ್ಗಾಹಿಸಿ ಎಂದು ಮನವಿ ಮಾಡಿದ್ದಾರೆ. ಭದ್ರತೆಗೆ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇದೀಗ ವೈರಲ್ ಆಗುತ್ತಿರುವ ಫೋಟೋಗಳು ಬೇರೆಯದ್ದೆ ಕಥೆ ಹೇಳುತ್ತಿವೆ. ಅಲ್ಲಿನ ಉಗ್ರರು ಹಿಂದೂಗಳ ದೇವಾಲಯವನ್ನು ಟಾರ್ಗೆಟ್ ಮಾಡುತ್ತಿದ್ದಾರ ಎಂಬ ಅನುಮಾನಗಳನ್ನು ಮೂಡಿಸಿದೆ.

ಕಳೆದ ಒಂದು ತಿಂಗಳಲ್ಲಿ ಒಂಭತ್ತು ಮಂದಿಯನ್ನು ಹತ್ಯೆ ಮಾಡಿದ್ದಾರೆ ಇಲ್ಲಿನ ಉಗ್ರರು. ಈ ಮಧ್ಯೆ ಭಗವಾನ್ ವಾಸುಕಿ ನಾಗ ದೇಗುಲವನ್ನು ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಜಮ್ಮುವಿನ ದೋಡಾ ಜಿಲ್ಲೆಯಲ್ಲಿರುವ ಈ ದೇವಸ್ಥಾನ 17,400 ಅಡಿ ಎತ್ತರದ ಕೈಲಾಸ ಕುಂಡ್ ನಲ್ಲಿದೆ. ತನ್ನದೇ ಆದ ಇತಿಹಾಸವನ್ನು ಈ ದೇವಸ್ಥಾನ ಹೊಂದಿದೆ. ಸ್ಥಳೀಯ ಜನ ಈ ದೇವಸ್ಥಾನಕ್ಕೆ ವಿಶೇಷ ಮಹತ್ವ ನೀಡುತ್ತಾರೆ. ಅಂಥದ್ರಲ್ಲಿ ಈ ದೇವಸ್ಥಾನವನ್ನೇ ಕುರೂಪ ಮಾಡಿದ್ದಾರೆ.

ಧ್ವಂಸದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ್ದನ್ನು ಗಮನಿಸಿದ ಭಧೇರ್ವಾಹ್ ನಲ್ಲಿರುವ ಸನಾತನ ಧರ್ಮದ ಸಭಾ ಮುಷ್ಕರಕ್ಕೆ ಕರೆ ನೀಡಿದೆ. ಇಂದು ಕಣಿವೆ ನಾಡಿನ ಹಲವೆಡೆ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಭದೇರ್ವಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ಐಆರ್ ಕೂಡ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!