ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಗ್ಯಾರಂಟಿ ಯೋಜನೆಗಳು ಚಾಲ್ತಿಯಲ್ಲಿದ್ದಾವೆ. ಗ್ಯಾರಂಟಿ ಯೋಜನೆಗಳಿಗೆ ಖರ್ಚಾಗುತ್ತಿರುವುದು ಕಡಿಮೆ ಹಣವೇನು ಅಲ್ಲ. ಕೋಟಿ ಕೋಟಿ ಖರ್ಚಾಗುತ್ತಿದೆ. ಈ ನಡುವೆ ಗ್ಯಾರಂಟಿ ಯೋಜನೆಗಳಿಗೆ ಹಣ ಸರಿದೂಗಿಸುವ ಕಾರಣ ನೀಡಿ ಕ್ಷೇತ್ರಗಳಿಗೆ ಅನುದಾನ ನೀಡುತ್ತಿಲ್ಲ ಎಂದು ರಾಜ್ಯದ ಶಾಸಕರು ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದರು. ಈ ಸಮಸ್ಯೆಯನ್ನು ಬಗೆಹರಿಸುವುದಕ್ಕೆ ಹೈಕಮಾಂಡ್ ನಾಯಕರು ಕೂಡ ಮಧ್ಯ ಪ್ರವೇಶ ಮಾಡಿದ್ದರು. ರಣದೀಪ್ ಸುರ್ಜೇವಾಲ ಅವರು ಒನ್ ಟು ಒನ್ ಸಭೆ ನಡೆಸಿದರು. ಇದೀಗ ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರು ಶಾಸಕರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಶಾಸಕರ ಕ್ಷೇತ್ರಗಳಿಗೆ 50 ಕೋಟಿ ಅನುದಾನವನ್ನು ರಿಲೀಸ್ ಮಾಡಲಾಗಿದೆ. ಶಾಸಕರ ಅಸಮಾಧಾನ ತಣಿಸಲು ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅಡಿ 50 ಕೋಟಿ ಅನುದಾನ ಬಿಡುಗಡರ ಮಾಡಲಾಗಿದೆ. ಈ ಮೂಲಕ ತಮ್ಮ ಪಕ್ಷದ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಅವರು ಅನುದಾನ ನೀಡುವ ಕೊಡುಗೆ ನೀಡಿದ್ದಾರೆ.
ಲೋಕೋಪಯೋಗಿ ಇಲಾಖೆ ರಸ್ತೆ, ಸೇತುವೆ, ಕಾಮಗಾರಿ, ಗ್ರಾಮೀಣ ರಸ್ತೆ ಹಾಗೂ ನಗರ ಕಾಮಗಾರಿಗಳಿಗೆ 37.5 ಕೋಡಿ ಮೀಸಲಿಡಲಾಗುತ್ತಿದೆ. ಜೊತೆಗೆ 12.5 ಕೋಟಿ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ. ಇನ್ನೂ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜುಲೈ 30-31ರಂದು ಎರಡು ದಿನ ಶಾಸಕರೊಂದಿಗೆ ಮ್ಯಾರಥಾನ್ ಮೀಟಿಂಗ್ ಮಾಡಲಿದ್ದಾರೆ. ಶಾಸಕರು ಕ್ಷೇತ್ರದ ಬೇಡಿಕೆಗಳ ಪಟ್ಟಿ ಸಮೇತ ವಿವರಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಒಟ್ಟಿನಲ್ಲಿ ಗ್ಯಾರಂಟಿಗೋಸ್ಕರ ಅನುದಾನವಿಲ್ಲ ಎಂದು ಹೇಳುತ್ತಿದ್ದವರಿಗೆ ಸಿದ್ದರಾಮಯ್ಯ ಅವರು ಈ ಮೂಲಕ ತಿರುಗೇಟು ಕೊಟ್ಟಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










