Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಜೆಡಿಎಸ್ ಭದ್ರಕೋಟೆ ಹೊಡೆಯಲು ಆಪರೇಷನ್ ಕಮಲ ಮಾಡಿಯೇ ಬಿಟ್ಟರಾ ಅಮಿತ್ ಶಾ..?

---Advertisement---

ಈ ಬಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲೇ ಬೇಕೆಂದು ಮೂರು ಪಕ್ಷಗಳು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ಅದರಲ್ಲೂ ಬಿಜೆಪಿ ಪಕ್ಷ ಗೆಲುವಿಲ್ಲದ ಸ್ಥಳದಲ್ಲಿ ಗೆಲುವು ಸಾಧಿಸಲು ಹೊರಟಿದೆ. ಹಳೆ ಮೈಸೂರು ಭಾಗದ ಕಡೆ ಹೆಚ್ಚೇನು ತಲೆ ಹಾಕದ ಬಿಜೆಪಿ ಈಗ ಅದೇ ಸ್ಥಳವನ್ನು ಟಾರ್ಗೆಟ್ ಲೀಸ್ಟ್ ನಲ್ಲಿ ಸೇರಿಸಿಕೊಂಡಿದೆ.

ಹಳೆ ಮೈಸೂರು ಭಾಗ ಜೆಡಿಎಸ್ ನ ಭದ್ರಕೋಟೆಯಾಗಿದೆ. ನಾವೂ ಯಾರ ಜೊತೆಗೂ ಹೊಂದಾಣಿಕೆ ರಾಜಕಾರಣ ಮಾಡಲ್ಲ ಎಂದು ಹೇಳಿದ್ದ ಅಮಿತ್ ಶಾ, ಈಗ ಹಳೆ ಮೈಸೂರು ಭಾಗದಲ್ಲಿ ಕಾಂಗ್ರಸ್ ನಾಯಕನನ್ನೇ ಆಪರೇಷನ್ ಕಮಲ ಮಾಡಿದೆ ಎನ್ನಲಾಗಿದೆ. ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಮೇಲೆ ರಾಜ್ಯ ಬಿಜೆಪಿ ನಾಯಕರು ಕೂಡ ಫುಲ್ ಅಲರ್ಟ್ ಆಗಿದ್ದಾರೆ. ಪಕ್ಷದ ಉದ್ಧಾರಕ್ಕೆ ಹೈಜಾಕ್, ಪ್ರಚಾರ ಎರಡನ್ನು ಮಾಡುವುದಕ್ಕೆ ನಿಂತಿದ್ದಾರೆ.

ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಅಲ್ಲಾಡಿಸಲು ಯಾರಿಗೂ ಸಾಧ್ಯವಿಲ್ಲ. ಹೀಗಾಗಿ ಅಲ್ಲಿ ಸ್ಟ್ರಾಂಗ್ ಕ್ಯಾಂಡಿಡೇಟ್ ಅನ್ನೇ ಹಾಕುವುದಕ್ಕೆ ಬಿಜೆಪಿ ನಿರ್ಧಾರ ಮಾಡಿದ್ದು, ಅದಕ್ಕೆಂದೆ ಕಾಂಗ್ರೆಸ್ ಮಾಜಿ ಶಾಸಕ ವಾಸು ಪುತ್ರ ಕವೀಶ್ ಗೌಡ ಅವರನ್ನು ಆಪರೇಷನ್ ಕಮಲದ ಮೂಲಕ ಸೆಳೆದಿದ್ದಾರೆ ಎನ್ನಲಾಗಿದೆ. ಕವೀಶ್ ಗೌಡ, ಅದಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಳಿ ಒನ್ ಟು ಒನ್ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗಿದೆ. ಜೊತೆಗೆ ಎರಡು ಬಾರಿ ಫೋನ್ ಮೂಲಕವೂ ಮಾತನಾಡಿ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

ಇನ್ನು ಜನವರಿ 25ರಂದು ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕವೀಶ್ ಗೌಡ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಇನ್ನು ಕವೀಶ್ ಗೌಡ ಅವರಿಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದಾರಂತೆ. ಜೆಡಿಎಸ್ ನ ಜಿಟಿ ದೇವೇಗೌಡ ಅವರ ವಿರುಧವಾಗಿ ಸ್ಪರ್ಧೆಗೆ ಇಳಿಯಲಿದ್ದಾರೆ ಎನ್ನಲಾಗಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...