ಪುತ್ತೂರಿನಲ್ಲಿ ʻಕಾಂತಾರʼ ಸಿನಿಮಾ ಹೊಗಳಿದ ಅಮಿತ್ ಶಾ : ನೆರೆದಿದ್ದವರ ಖುಷಿ ನೋಡಬೇಕಿತ್ತು..!

ಪುತ್ತೂರು: ಗುಜರಾತ್ ಚುನಾವಣೆಯ ಬಳಿಕ ಬಿಜೆಪಿ ನಾಯಕರಿಗೆ ಕರ್ನಾಟಕ ಚುನಾವಣೆ ಬಹಳ ಮುಖ್ಯವಾಗಿದೆ. ಹೇಗಾದರೂ ಮಾಡಿ ಕರ್ನಾಟಕವನ್ನು ಗೆಲ್ಲಲೇಬೇಕೆಂದುಕೊಂಡಿದ್ದಾರೆ. ಅದಕ್ಕಾಗಿ ಹೊಸ ಹೊಸ ಸ್ಟಾಟರ್ಜಿ ಬಳಕೆ ಮಾಡುತ್ತಿದ್ದಾರೆ. ಜೊತೆಗೆ ಗುಜರಾತ್ ಸ್ಟಾಟರ್ಜಿಯನ್ನು ಪ್ರಯೋಗ ಮಾಡುತ್ತಿದ್ದಾರೆ.

ಇದೀಗ ಬ್ಯಾಕ್ ಟು ಬ್ಯಾಕ್ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಕೇಂದ್ರ ನಾಯಕರು ಜನರನ್ನು ಇಂಪ್ರೆಸ್ ಮಾಡುವುದಕ್ಕೆ ಪ್ರಯತ್ನಿಸುತ್ತಿದ್ದಾರೆ. ಇತ್ತಿಚೆಗಷ್ಟೇ ಪ್ರಧಾನಿ ಮೋದಿ ಅವರು ಬಂದು ರಾಜ್ಯದಲ್ಲೆಡೆ ಸಂಚರಿಸಿ ಹೋಗಿದ್ದರು. ಒಂದಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಿದ್ದರು. ಇದೀಗ ಅಮಿತ್ ಶಾ ಅವರ ಸರದಿ ಬಂದಿದೆ. ರಾಜ್ಯಕ್ಕೆ ಬಂದಿರುವ ಅಮಿತ್ ಶಾ, ಪುತ್ತೂರಿನ ಜನತೆಗೆ ಇಂಪ್ರೆಸ್ ಆಗುವಂತೆ ಮಾತನಾಡಿದ್ದಾರೆ.

ಸದ್ಯ ಚಿತ್ರರಂಗದಲ್ಲಿ ಕಾಂತಾರ ಸಿನಿಮಾದ ಅಬ್ಬರವೇ ಹೆಚ್ಚಾಗಿದೆ. 100 ದಿನಗಳ ಯಶಸ್ವಿ ಪ್ರದರ್ಶನ ಕಂಡಿದೆ. ಹಲವು ಹೊಸ ದಾಖಲೆಗಳನ್ನು ಮಾಡಿದೆ. ಕೇಂದ್ರ ಗೇಹ ಸಚಿವ ಅಮಿತ್ ಶಾ ಈಗ ಅದೇ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ನಾನು ಕಾಂತಾರ ಸಿನಿಮಾ ನೋಡಿದೆ ಎಂದು ಅಮಿತ್ ಶಾ, ಪುತ್ತೂರಿನ ಕ್ಯಾಂಪ್ಕೋ ಸಂಸ್ಥೆಯ 50ನೇ ವಾರ್ಷಿಕೋತ್ಸವದಲ್ಲಿ ಹೇಳಿದ್ದೆ ತಡ ನೆರೆದಿದ್ದ ಜನ ಹುಚ್ಚೆದ್ದವರಂತೆ ಕುಣಿದು ಕುಪ್ಪಳಿಸಿದ್ದಾರೆ.

ಅಮಿತ್ ಶಾ ಅವರು, ನಾನು ಕಾಂತಾರ ಸಿನಿಮಾವನ್ನು ನೋಡಿದ್ದೇನೆ. ಕಾಂತಾರ ನೋಡಿದ ಮೇಲೆ ನನಗೆ ಗೊತ್ತಾಯ್ತು, ಕರಾವಳಿ ಸಂಸ್ಕೃತಿ ಎಂಥದ್ದು ಎಂಬುದು. ಮಂಗಳೂರು ಧಾರ್ಮಿಕ ಸಂಸ್ಕೃತಿಯಿಂದ ಸಮೃದ್ಧವಾಗಿದೆ. ಈ ಪುಣ್ಯ ಭೂಮಿಗೆ ನನ್ನ ನಮನಗಳು ಎಂದಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

54 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago