ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಕೊಪ್ಪಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂಬುದು ಬಿಜೆಪಿ ನಾಯಕರ ಆಶಯವಾಗಿದೆ. ಅದಕ್ಕೆಂದೆ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬಿಜೆಪಿ ಹೈಕಾಂಡ್ ನಾಯಕರು ಸಹ ಕರ್ನಾಟಕದ ಅಖಾಡಕ್ಕೆ ಇಳಿಯುತ್ತಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಕೊಪ್ಪಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ನಿಗದಿಯಾಗಿತ್ತು. ಆದರೆ ಈಗ ಅದು ರದ್ದಾಗಿದೆ.
ಅಮಿತ್ ಶಾ ಇಂದು ಮಧ್ಯಾಹ್ನ ಮಸ್ಕಿಯಿಂದ ಕಾರಟಗಿಗೆ ಬಂದು ಒಂದು ಕಿಮೀ ರೋಡ್ ಶೋ ನಡೆಸಿ, ಬಳಿಕ ಕನಕಗಿರಿಯಲ್ಲಿ ಪ್ರಚಾರ ನಡೆಸಬೇಕಿತ್ತು. ಸಂಜೆ ವೇಳೆಗೆ ಕೊಪ್ಪಳದಲ್ಲಿ ರೋಡ್ ಶೋ ನಿಗದಿಯಾಗಿತ್ತು. ಆದರೆ ಇವತ್ತಿನ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ. ಯಾಕಂದ್ರೆ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಪರಿಶಿಷ್ಟ ಪಂಗಡಕ್ಕೆ ಸಮುದಾಯವೊಂದನ್ನು ಸೇರಿಸುವ ನಿರ್ಧಾರದಿಂದ ಅಲ್ಲಿನ ಜನ ರೊಚ್ಚಿಗೆದ್ದಿದ್ದಾರೆ. ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರ ತಡೆಯಲು ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಐದು ದಿನದಿಂದ ಮೊಬೈಲ್, ಇಂಟರ್ನೆಟ್ ಕೂಡ ಸ್ಥಗಿತಗೊಂಡಿದೆ. ಹೀಗಾಗಿ ಅಲ್ಲಿ ಹಿಂಸಾಚಾರ ಜಾಸ್ತಿಯಾಗುತ್ತಿರುವ ಹಿನ್ನೆಲೆ ಇಲ್ಲಿನ ಕಾರ್ಯಕ್ರಮ ರದ್ದು ಮಾಡಿಕೊಂಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್