Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಇಲ್ಲಿ ಅಮಿತ್ ಶಾ ರೋಡ್ ಶೋ ಕ್ಯಾನ್ಸಲ್..!

Facebook
Twitter
Telegram
WhatsApp

 

ಕೊಪ್ಪಳ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರಬೇಕು ಎಂಬುದು ಬಿಜೆಪಿ ನಾಯಕರ ಆಶಯವಾಗಿದೆ. ಅದಕ್ಕೆಂದೆ ಶತಾಯಗತಾಯ ಪ್ರಯತ್ನ ಮಾಡುತ್ತಿರುವ ಬಿಜೆಪಿ ಹೈಕಾಂಡ್ ನಾಯಕರು ಸಹ ಕರ್ನಾಟಕದ ಅಖಾಡಕ್ಕೆ ಇಳಿಯುತ್ತಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಕೊಪ್ಪಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ನಿಗದಿಯಾಗಿತ್ತು. ಆದರೆ ಈಗ ಅದು ರದ್ದಾಗಿದೆ.

ಅಮಿತ್ ಶಾ ಇಂದು ಮಧ್ಯಾಹ್ನ ಮಸ್ಕಿಯಿಂದ ಕಾರಟಗಿಗೆ ಬಂದು ಒಂದು ಕಿಮೀ ರೋಡ್ ಶೋ ನಡೆಸಿ, ಬಳಿಕ ಕನಕಗಿರಿಯಲ್ಲಿ ಪ್ರಚಾರ ನಡೆಸಬೇಕಿತ್ತು. ಸಂಜೆ ವೇಳೆಗೆ ಕೊಪ್ಪಳದಲ್ಲಿ ರೋಡ್ ಶೋ ನಿಗದಿಯಾಗಿತ್ತು. ಆದರೆ ಇವತ್ತಿನ ಅವರ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ. ಯಾಕಂದ್ರೆ ಮಣಿಪುರದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.

ಪರಿಶಿಷ್ಟ ಪಂಗಡಕ್ಕೆ ಸಮುದಾಯವೊಂದನ್ನು ಸೇರಿಸುವ ನಿರ್ಧಾರದಿಂದ ಅಲ್ಲಿನ ಜನ ರೊಚ್ಚಿಗೆದ್ದಿದ್ದಾರೆ. ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದೆ. ಹಿಂಸಾಚಾರ ತಡೆಯಲು ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ. ಐದು ದಿನದಿಂದ ಮೊಬೈಲ್, ಇಂಟರ್ನೆಟ್ ಕೂಡ ಸ್ಥಗಿತಗೊಂಡಿದೆ. ಹೀಗಾಗಿ ಅಲ್ಲಿ ಹಿಂಸಾಚಾರ ಜಾಸ್ತಿಯಾಗುತ್ತಿರುವ ಹಿನ್ನೆಲೆ ಇಲ್ಲಿನ ಕಾರ್ಯಕ್ರಮ ರದ್ದು ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ : ಸತೀಶ್ ಜಾರಕಿಹೊಳಿ

ಚಿತ್ರದುರ್ಗ, ಏ. 24 :  ವೀರ ಮದಕರಿ ನಾಯಕ ನಾಡಿನ ಎಲ್ಲ ಜಾತಿ ಜನರ ಪ್ರೀತಿ ಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಗೆಲುವು ಚಿತ್ರದುರ್ಗದ ಸಮಗ್ರ ಅಭಿವೃದ್ಧಿಗೆ ಸಹಕಾರಿ ಆಗಲಿದೆ ಎಂದು ಸಚಿವ ಸತೀಶ್

ಮೈಸೂರಿನಲ್ಲಿ ಅಭ್ಯರ್ಥಿ ಬದಲಾಯಿಸಿದ್ದೇಕೆ..? ಯದುವೀರ್ ಗೆ ಟಿಕೆಟ್ ಕೊಟ್ಟಿದ್ದೇಕೆ..?: ಸ್ಪಷ್ಟನೆ ನೀಡಿದ ವಿಜಯೇಂದ್ರ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಭರ್ಜರಿಯಾಗಿ ನಡೆಯುತ್ತಿದೆ. ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಅದರಲ್ಲೂ ಈ ಬಾರಿ ಬಿಜೆಪಿಯಲ್ಲಿ ಹೊಸಬರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಘಟಾನುಘಟಿಗಳಿಗೆ ಟಿಕೆಟ್ ಮಿಸ್ ಆಗಿದೆ. ಮೈಸೂರಿನಿಂದ ಪ್ರತಾಪ್

ಡಾ.ರಾಜ್ 95ನೇ ಹುಟ್ಟುಹಬ್ಬ : ಸಮಾಧಿಗೆ ಪೂಜೆ ಸಲ್ಲಿಸಿದ ರಾಘಣ್ಣ, ಅಶ್ವಿನಿ, ವಂದಿತಾ

ಬೆಂಗಳೂರು: ಇಂದು ವರನಟ ಡಾ.ರಾಜ್ ಕುಮಾರ್ ಅವರ 95ನೇ ವರ್ಷದ ಹುಟ್ಟುಹಬ್ಬ. ಅವರ ಅಭಿಮಾನಿಗಳು ರಾಜ್ಯಾದ್ಯಂತ ಈ ಸಂಭ್ರಮವನ್ನು ಆಚರಿಸುತ್ತಿದ್ದಾರೆ. ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ, ಅಣ್ಣಾವ್ರ ಹುಟ್ಟುಹಬ್ಬವನ್ನು ಸಾರ್ಥಕ ಮಾಡುತ್ತಿದ್ದಾರೆ. ಅವರ ಅಭಿಮಾನಿಗಳಿಂದ ಪ್ರತಿ

error: Content is protected !!