ಬೆಳಗಾವಿ: ಅಣ್ಣಾಮಲೈ ಅಧಿಕಾರದಲ್ಲಿದ್ದಾಗ ಉದ್ಯಮಿ ಆರ್ ಎನ್ ನಾಯಕ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಸದ್ಯ ಅಣ್ಣಾ ಮಲೈ ಅವರು ಸ್ವಯಂ ನಿವೃತ್ತಿ ಘೋಷಿಸಿಕೊಂಡಿದ್ದಾರೆ. ಆದ್ರೆ ಅವರ ಸಮಯದಲ್ಲಿದ್ದ ಪ್ರಕರಣಕ್ಕೆ ಈಗ ಸಾಕ್ಷ್ಯ ಹೇಳಿದ್ದಾರೆ.
ಬೆಳಗಾವಿಯ ಕೋಕಾ ನ್ಯಾಯಾಲಯದಲ್ಲಿ ಇಂದು ಸಾಕ್ಷಿ ಹೇಳಿದ್ದಾರೆ. ಭೂಗತ ಪಾತಕಿ ಬನ್ನಂಜೆ ರಾಜಾ ವಿರುದ್ಧ ಸಾಕ್ಷಿ ನುಡಿದ್ದಾರೆ. 2015ರಲ್ಲಿ ಬನ್ನಂಜೆ ರಾಜನನ್ನು ಕೋಕಾ ಕಾಯ್ದೆಯಡಿ ಮೊರಾಕ್ಕೊದಲ್ಲಿ ಬಂಧಿಸಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳುಹಿಸಲಾಗಿತ್ತು. ಇನ್ನು ರಾಜ್ಯದಲ್ಲಿ ದಾಖಲಾದ ಮೊದಲ ಕೋಕಾ ಪ್ರಕರಣವಾಗಿತ್ತು.
ಬನ್ನಂಜೆ ರಾಜ ಜೈಲಿನಲ್ಲಿದ್ದರೂ ಸಹಚರರ ಮೂಲಕ ಆಗಾಗ ಉದ್ಯಮಿಗಳಿಗೆ ಬೆದರಿಕೆ ಹಾಕಿಸುತ್ತಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು. ಇದೀಗ ಹಳೆ ಕೇಸ್ ಗೆ ಸಂಬಂಧಿಸಿದಂತೆ ಅಣ್ಣಾಮಲೈ ಸಾಕ್ಷಿ ನುಡಿದಿದ್ದಾರೆ. ಈ ವೇಳೆ ಎಡಿಜಿಪಿ ಪ್ರತಾಪ್ ರೆಡ್ಡಿ ಮತ್ತು ಭಾಸ್ಕರ್ ರಾವ್ ಸಹ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…