ಸದ್ಯ ರಾಜ್ಯದಲ್ಲೂ ಅಮಿಬಾದೆ ಆತಂಕವಾಗಿದೆ. ಕೇರಳದಲ್ಲಿ ಈ ಅಮಿಬಾದಿಂದ ಹತ್ತೊಂಭತ್ತು ಜನರ ಪ್ರಾಣ ಹೋಗಿದೆ. ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದಿಂದ ಜನ ಆತಂಕದಲ್ಲಿದ್ದಾರೆ. ಅಂದ್ರೆ ಪೊವ್ಲೆರಿ ಅಮಿಬಾ ಕಾಟ ಹೆಚ್ಚಾಗಿದೆ. ಇದರಿಂದ ಸಾವಿನ ಸಂಖ್ಯೆಯು ಏರಿಕೆಯಾಗ್ತಾನೆ ಇದೆ. ಈಗಾಗಲೇ 19 ಜನ ಸಾವನ್ನಪ್ಪಿರುವ ಕಾರಣ, ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಈ ಸೋಂಕು ನೆಗ್ಲಿರಿಯಾ ಪೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಈ ಸೋಂಕು ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮಿಬಾ ಬೆಳೆಯುತ್ತದೆ. ಒ.ಮದು ವೇಳೆ ಅಂತಹ ನೀರಿನಲ್ಲಿ ಈಜಾಡಿದ್ರೆ ಅಮಿಬಾವು ಮೂಗಿನ ಮೂಲಕ ನಮ್ಮ ಮೆದುಳು ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಕೆ ಹಾನಿಯುಂಟು ಮಾಡುತ್ತದೆ. ಕೆಲವೊನ್ಮೆ ಸೋಂಕಿನ ಪ್ರಮಾಣವೂ ಹೆಚ್ಚಾದಾಗ ಸಾವು ಕೂಡ ಸಂಭವಿಸುತ್ತದೆ. ಈಗ ಕೇರಳದಲ್ಲಿ ಅದೇ ಪರಿಸ್ಥಿತಿ ಎದುರಾಗಿದೆ.
ಆದರೆ ಈ ರೋಗ ಒಬ್ಬರಿಂದ ಒಬ್ಬರಿಗೆ ಹರಡುವಂತದ್ದಲ್ಲ. ಈ ಸೋಂಕಿನ ಲಕ್ಷಣಗಳು ಸಾಮಾನ್ಯ ಕಾಯಿಲೆಗೆ ಕಂಡಂತೆಯೇ ಕಾಣಿಸುತ್ತವೆ. ತಲೆನೋವು, ಜ್ವರ, ವಾಕರಿಕೆ ಮತ್ತು ವಾಂತಿ ಕಾಣಿಸಿಕೊಳ್ಳುತ್ತದೆ. ಸೋಂಕು ತಗುಲುವುದಕ್ಕೂ ಮುನ್ನವೇ ಮುನ್ನೆಚ್ಚರಿಕೆ ವಹಿಸುವುದು ಬಹಳ ಮುಖ್ಯವಾಗಿದೆ. ನಿಂತ ನೀರಲ್ಲಿ ಈಜುವುದಕ್ಕೆ ಹೋಗಬೇಡಿ. ಕೇರಳದ ಸದ್ಯದ ಸ್ಥಿತಿ ಕಂಡ ಕರ್ನಾಟಕ ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕೆ ವಹಿಸುತ್ತಿದೆ. ನಮ್ಮ ರಾಜ್ಯದಲ್ಲಿ ಯಾವುದೇ ರೀತಿ ನೆಗ್ಲೆರಿಯಾ ಫೊವ್ಲೆರಿ ಸೋಂಕು ಕಾಣಿಸಿಕೊಂಡಿಲ್ಲ..ಆದ್ರೂ ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

