Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಮೃತಧಾರೆ ಸೀರಿಯಲ್ ನಟಿಗೆ ಗಂಡನಿಂದಲೆರ ಚಾಕು ಇರಿತ : ಶೀಲ ಶಂಕಿಸಿ ಹಲ್ಲೆ..!

---Advertisement---

ಬೆಂಗಳೂರು: ಅಮೃತಧಾರೆ ಸೇರಿದಂತೆ ಹಲವು ಸೀರಿಯಲ್ ಗಳಲ್ಲಿ ನಟಿಸಿದ್ದ ನಟಿ ಶೃತಿ ಈಗ ಆಸ್ಪತ್ರೆಯಲ್ಲಿದ್ದಾರೆ. ಗಂಡನೇ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಹನುಮಂತ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ಮುನೇಶ್ವರ ಲೇಔಟ್ ನಲ್ಲಿ ಈ ಘಟನೆ ನಡೆದಿದೆ. ಹೊಟ್ಟೆ, ಕುತ್ತಿಗೆ ಭಾಗಕ್ಕೆ ಚಾಕು ಇರಿದಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಮಂಜುಳಾ ಅಲಿಯಾಸ್ ಶೃತಿ ಕಳೆದ 20 ವರ್ಷಗಳ ಹಿಂದೆ ಅಮರೇಶ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಹನುಮಂತ ನಗರದಲ್ಲಿಯೇ ಮನೆ ಲೀಸ್ ಗೆ ಪಡೆದು ವಾಸವಿದ್ದರು. ಶೃತಿ ನಡವಳಿಕೆ ಅಮರೇಶ್ ಗೆ ಇಷ್ಟವಾಗುತ್ತಿರಲಿಲ್ಲವಂತೆ. ಆಗಾಗ ಇಬ್ಬರ ನಡುವೆ ಸಾಕಷ್ಟು‌ ಜಗಳ ಆಗ್ತಾ ಇತ್ತಂತೆ. ಹೀಗಾಗಿ ಕಳೆದ ಏಪ್ರಿಲ್ ನಿಂದ ನಟಿ ಶೃತಿ, ಗಂಡನ ಮನೆ ತೊರೆದು ಅಣದಣನ ಮನೆಯಲ್ಲಿ ವಾಸವಾಗಿದ್ದರಂತೆ.

ಇದೆ ವೇಳೆ ಮನೆಯ ಲೀಸ್ ಹಣಕ್ಕಾಗಿ ಇಬ್ಬರ ನಡುವೆ ಜೋರು ಜಗಳವಾಗುತ್ತಿತ್ತಂತೆ. ಈ ಸಂಬಂಧ ಶೃತಿ ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ಕೂಡ ನೀಡಿದ್ದರಂತೆ. ಆಗ ರಾಜಿ ಸಂಧಾನದ ಮೂಲಕ ಮತ್ತೆ ಹೊಂದಾಗಿದ್ದರು ಗಂಡ ಹೆಂಡತಿ. ಇಂದು ಮಕ್ಕಳು ಕಾಲೇಜಿಗೆ ಹೋದ ಬಳಿಕ ಹೆಂಡತಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ, ಚಾಕುವಿನಿಂದ ಇರಿದಿದ್ದಾನೆ. ತಲೆಯನ್ನ ಗೋಡೆಗೆ ಗುದ್ದಿ ಕೊಲೆಗೆ ಯತ್ನಿಸಿದ್ದಾನೆ ಎಂಬ ಆರೋಪ ಕೂಡ ಕೇಳಿ ಬಂದಿದೆ. ಸದ್ಯ ನಟಿ ಶೃತಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment