ಒಂದು ಯುಗ ಮುಗಿದಿದೆ, ನಾಳೆಯಿಂದ ನೂತನ ಸಂಸತ್ ಭವನದಲ್ಲಿ ಸಭೆ: ಲೋಕಸಭೆ ಸ್ಪೀಕರ್

Facebook
Twitter
Telegram
WhatsApp

ನವದೆಹಲಿ : ಹಳೆಯ ಸಂಸತ್ ಭವನದ ಯುಗ ಇಂದಿಗೆ ಅಂತ್ಯಗೊಂಡಿದೆ. ನಾಳೆಯಿಂದ ಹೊಸ ಕಟ್ಟಡದಲ್ಲಿ ಸಂಸತ್ ಅಧಿವೇಶನ ನಡೆಯಲಿದೆ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. 

ಸಂಸತ್ತಿನ ವಿಶೇಷ ಅಧಿವೇಶನದ ಮೊದಲ ದಿನವಾದ ಸೋಮವಾರ ಸಂಜೆ ಕಲಾಪ ಮುಗಿಯುವ ಮುನ್ನ ಈ ಕುರಿತು ಸದಸ್ಯರಿಗೆ ಮಾಹಿತಿ ನೀಡಿದರು.

ಸದನವನ್ನು ನಾಳೆಗೆ ಮುಂದೂಡಲಾಗುವುದು ಎಂದು ಪ್ರಕಟಿಸಿದ ಸ್ಪೀಕರ್ ಓಂ ಬಿರ್ಲಾ, ನಾಳೆಯಿಂದ ಹೊಸ ಸಂಸತ್ ಭವನದಲ್ಲಿ ಸಭೆಗಳು ನಡೆಯಲಿವೆ ಎಂದು ತಿಳಿಸಿದರು.
ನೂತನ ಸಂಸತ್ ಭವನದಲ್ಲಿ ಬೆಳಗ್ಗೆ ಗಣಪತಿ ಪೂಜೆ ನಡೆಯಲಿದೆ ಎಂದು ವರದಿಯಾಗಿದೆ.

ಮೊದಲು 9.30. ಪ್ರದೇಶದಲ್ಲಿ ಫೋಟೋ ಸೆಷನ್ ಆಯೋಜಿಸಲಾಗುವುದು. ನಂತರ ಕೇಂದ್ರ ಸಭಾಂಗಣದಲ್ಲಿ ಸಂಸದರು ಸಭೆ ನಡೆಸಲಿದ್ದಾರೆ. ಪ್ರಧಾನಿ ಮೋದಿ ಅವರು ಸಂಸದರೊಂದಿಗೆ ನೂತನ ಸಂಸತ್ ಭವನ ಪ್ರವೇಶಿಸಲಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲ ಸಂಸದರಿಗೂ ಉಡುಗೊರೆ ನೀಡಲಾಗುವುದು.
ಈ ಉಡುಗೊರೆ ಚೀಲದಲ್ಲಿ ಸಂವಿಧಾನದ ಪುಸ್ತಕ, ಸಂಸತ್ತಿನ ಪುಸ್ತಕಗಳು, ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ ಇರುತ್ತದೆ ಎಂದು ವರದಿಯಾಗಿದೆ. ನಂತರ ಮಧ್ಯಾಹ್ನ 1.15ಕ್ಕೆ ಲೋಕಸಭೆ ಅಧಿವೇಶನ  ಮತ್ತು 2.15 ನಿಮಿಷಕ್ಕೆ ರಾಜ್ಯಸಭೆ ಅಧಿವೇಶನ ಆರಂಭವಾಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಿ ಕೆಲಸ ಕೊಡಿಸುವುದಾಗಿ ಸಚಿವರ ಆಪ್ತರಿಂದ ಕೋಟಿ ಕೋಟಿ ಲೂಟಿ : ರಾಯಚೂರು ನಿರುದ್ಯೋಗಿ ಯುವಕರಿಗೆ ಮೋಸ..!

ರಾಯಚೂರು: ರಾಜ್ಯದಲ್ಲಿ ಚೈತ್ರಾ ಮೋಸ ಇನ್ನು ವಿಧವಿಧವಾಗಿ ತೆರೆದುಕೊಳ್ಳುತ್ತಲೇ ಇದೆ. ಬಿಜೆಪಿ ಎಂಎಲ್ಎ ಟಿಕೆಟ್ ಕೊಡುವುದಾಗಿ ಹೇಳಿ ಮೋಸ ಮಾಡಿದ್ದಾಳೆ‌. ಆದರೆ ಈಗ ಮತ್ತೊಂದು ಮೋಸ ಬಯಲಾಗಿದೆ. ಸಚಿವರ ಆಪ್ತರೊಬ್ಬರು ನಿರುದ್ಯೋಗಿ ಯುವಕರನ್ನೇ ಟಾರ್ಗೆಟ್

ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ ಮಾಜಿ ಪ್ರಧಾನಿ ದೇವೇಗೌಡ..!

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ಆಗ್ರಹಿಸಿ ಇಂದು ಹಲವಾರು ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ಮಾಜಿ ಪ್ರಧಾನಿ ದೇವೇಗೌಡ್ರು ಸುದ್ದಿಗೋಷ್ಟಿ ನಡೆಸಿ, ಕಾವೇರಿ ವಿಚಾರಕ್ಕೆ ಕಣ್ಣೀರು ಹಾಕಿದ್ದಾರೆ‌. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ

ಹಿರಿಯೂರಿನಲ್ಲಿ ನಡೆದ ಜನತಾ ದರ್ಶನ ಹೇಗಿತ್ತು ? ಸಚಿವ ಸುಧಾಕರ್ ಅಧಿಕಾರಿಗಳಿಗೆ ನೀಡಿದ ಸೂಚನೆ ಏನು ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್…!

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.25 : ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರ ಒದಗಿಸಬೇಕು ಎಂದು ಯೋಜನಾ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಿರಿಯೂರು

error: Content is protected !!