Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಟ‌ ಉಪೇಂದ್ರ ವಿರುದ್ಧ ನಿನ್ನೆ ಒಂದು ಇವತ್ತು ಒಂದು ಎಫ್ಐಆರ್ ದಾಖಲು..!

Facebook
Twitter
Telegram
WhatsApp

 

 

ಬೆಂಗಳೂರು: ಭಾಷಣದ ವಿಡಿಯೋ ಒಂದರಲ್ಲಿ ನಟ ಉಪೇಂದ್ರ ಎಸ್ಸಿ/ಎಸ್ ಟಿ ಸಮುದಾಯದವರನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಎಫ್ಐಆರ್ ದಾಖಲಾಗಿದೆ. ನಿನ್ನೆ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

ಕರ್ನಾಟಕ ರಣಧೀರ ಪಡೆಯ ಭೈರಪ್ಪ ಹರೀಶ್ ಎಂಬುವವರು ದೂರು ನೀಡಿದ್ದಾರೆ. ಐಪಿಸಿ ಸೆಕ್ಷನ್ 505(1)(c),153a, 295 a ಹಾಗೂ ಎಸ್​​ಸಿ, ಎಸ್​ಟಿ ಪ್ರಿವೆನ್ಷನ್ ಆಕ್ಟ್​ 3(1) (r) (s) ಅಡಿ ಎಫ್​​ಐಆರ್​ ದಾಖಲಾಗಿದೆ.

ನಿನ್ನೆ ಫೇಸ್ ಬುಕ್ ಲೈವ್ ನಲ್ಲಿ ನಟ ಉಪೇಂದ್ರ ಮಾತನಾಡುವಾಗ ಊರು ಇದ್ದೆಡೆ ಹೊಲಗೇರಿ ಇರುತ್ತೆ ಎಂಬ ಗಾದೆ ಮಾತನ್ನು ಬಳಕೆ ಮಾಡಿ, ಒಂದು ಸಮುದಾಯಕ್ಕೆ ಅವಮಾನ ಮಾಡಿದ್ದರು. ಈ ಸಂಬಂಧ ದೂರು ದಾಖಲಾಗಿದೆ. ಇನ್ನು ಉಪೇಂದ್ರ ಕ್ಷಮೆಯನ್ನು ಕೇಳಿದ್ದಾರೆ. ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ.
50 ವರ್ಷಗಳ ಹಿಂದೆ ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ …. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ಧ್ವೇಷ ? ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!