Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ರೇಸಲ್ಲಿ ಆಕಾಂಕ್ಷಿಗಳು ಬೆಳೆಯುತ್ತಿರುವ ಹೊತ್ತಲ್ಲೆ ಸಿದ್ದರಾಮಯ್ಯರಿಂದ‌ ಮಹತ್ವದ ಘೋಷಣೆ..!

---Advertisement---

 

 

ಬೆಂಗಳೂರು: ಮೂಡಾ‌ ಹಗರಣದಿಂದ ಸಿಎಂ ಸಿದ್ದರಾಮಯ್ಯ ಅವರ ಮೇಲೆ ವಿಪಕ್ಷ ನಾಯಕರು ದಾಳಿ ನಡೆಸುತ್ತಲೇ ಇದ್ದಾರೆ. ಕೇಸ್ ಕೋರ್ಟ್ ನಲ್ಲಿ ನಡೆಯುತ್ತಿರುವ ಕಾರಣ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತೆ, ಸರ್ಕಾರ ಪತನವಾಗುತ್ತೆ ಎಂದೇ ವಿಪಕ್ಷ ನಾಯಕರು ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದರ ನಡುವೆ ನಾನು ಕೂಡ ಸಿಎಂ ಆಕಾಂಕ್ಷಿ, ನಾನ್ಯಾಕೆ ಸಿಎಂ ಆಗಬಾರದು ಅಂತ ಹನುಮಂತನ ಬಾಲ ಬೆಳೆದಂತೆ ಆಕಾಂಕ್ಷಿಗಳ ಲೀಸ್ಟ್ ಬೆಳೆಯುತ್ತಾ ಹೋಗುತ್ತಿದೆ. ಹೀಗಾಗಲೇ ಸಿಎಂ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ, ಆರ್ ವಿ ದೇಶಪಾಂಡೆ, ರಾಯರೆಡ್ಡಿ, ಶಾಮನೂರು ಶಿವಶಂಕರಪ್ಪ ಇದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಆಕಾಂಕ್ಷಿಗಳಿಗೆಲ್ಲಾ ಮಹತ್ವದ ಸಂದೇಶ‌ ಸಾರಿದ್ದಾರೆ. ಮುಂದಿನ ನಾಲ್ಕು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿದ್ದಾರೆ.

ಯಾರು ಕೂಡ ಸಿಎಂ ಆಗುತ್ತೇನೆ ಎಂದು ಹೇಳಿಕೆ ಕೊಟ್ಟಿಲ್ಲ. ಈಗ ಸಿಎಂ ಖುರ್ಚಿ ಖಾಲಿಯೂ ಇಲ್ಲ. ಖಾಲಿ ಆದಾಗ ನಾವೂ ಬರುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಡೌಟ್ ಇಲ್ಲ. ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಯಾರಿಗೂ ಸಿಎಂ ಬದಲಾವಣೆಯಾಗುತ್ತೆ ಎಂಬ ಅನುಮಾನವಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಲಿ ಅಂತ ಸಚಿವರು ಪತ್ರ ಬರೆದಿದ್ದಾರೆ ಎಂದಿದ್ದಾರೆ.

 

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ನೇತೃತ್ವದಲ್ಲಿ ಸಮತಿ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ, ಪಾಟೀಲ್ , ಸಂತೋಷ್ ಲಾಡ್, ಕೃಷ್ಣಭೈರೇಗೌಡ ಆ ಸಮಿತಿಯಲ್ಲಿ ಇದ್ದಾರೆ. ಸುಮಾರು 21 ಹಗರಣ ಕಳೆದ ಸರ್ಕಾರದಲ್ಲಿ ಆಗಿದೆ. ಹಗರಣಗಳ ತನಿಖೆ ಮಾಡಿ ಸಂಪುಟಕ್ಕೆ ವರದಿ ಸಲ್ಲಿಸಲು ಹೇಳಿದ್ದೀನಿ. ಎಲ್ಲಾ ಹಗರಣಗಳ ತನಿಖೆಗೆ ಹೇಳಿಲ್ಲ. ಕೋವಿಡ್ 19, 40% ಸೇರಿ ಹಲವು ಹಗರಣಗಳ ತನಿಖೆಗೆ ಅಷ್ಟೇ ಹೇಳಿದ್ದೀನಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...