Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತನ್ನ ಉದ್ಯಮಕ್ಕೆ ಎದುರಾಳಿಯೆಂದು ಎಂಡಿ, ಸಿಇಒ ಇಬ್ಬರನ್ನೂ ಕೊಂದ ಹಳೆ ಉದ್ಯೋಗಿ..!

Facebook
Twitter
Telegram
WhatsApp

ಬೆಂಗಳೂರು: ಕೆಲವೊಮ್ಮೆ ಕೊಲೆಗಳ ಹಿಂದಿನ ಕಾರಣ ಕೇಳಿದ್ರೆ ಬೆಚ್ಚಿ ಬೀಳಸುತ್ತೆ. ಇಷ್ಟು ಸಿಲ್ಲಿ ಕಾರಣಕ್ಕೆ ಪ್ರಾಣವನ್ನೇ ತೆಗೆದುಬಿಟ್ಟರಲ್ಲ ಅಂತ. ಅಂತದ್ದೇ ಘಟನೆ ಈಗ ಬೆಂಗಳೂರಲ್ಲೂ ನಡೆದಿದೆ. ಹಾಡಹಗಲೇ ಕಂಪನಿಯೊಂದರ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಅಮೃತಹಳ್ಳಿಯಲ್ಲಿ ನಡೆದಿದೆ.

ಏರೋನಿಕ್ಸ್ ಇಂಟರ್ನೆಟ್ ಕಂಪನಿಯ ಎಂಡಿ ಪಣೀಂದ್ರ ಹಾಗೂ ಸಿಇಒ ವಿನು ಕುಮಾರ್ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಇದೇ ಸಂಸ್ಥೆಯ ಮಾಜಿ ಉದ್ಯೋಗಿ ಫೆಲಿಕ್ಸ್ ಕೊಲೆ ಮಾಡಿದ ವ್ಯಕ್ತಿಯಾಗಿದ್ದಾನೆ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿಯಾಗಿದ್ದರಿಂದ ಫೆಲಿಕ್ಸ್ ಈ ಕೊಲೆ ಮಾಡಿದ್ದಾನೆ.

ಫೆಲಿಕ್ಸ ಏರೋನಿಕ್ಸ್ ಕಂಪನಿಯಿಂದ ಹೊರ ಬಂದು ತನ್ನದೇ ಸ್ವಂತ ಕಂಪನಿ ಆರಂಭಿಸಿದ್ದ. ತನ್ನ ಉದ್ಯಮಕ್ಕೆ ಹಳೇ ಕಂಪನಿ ಎದುರಾಳಿ ಆಗಿದ್ದರಿಂದ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಗೆ ಸಂಚು ಹೂಡಿದ್ದ ಫೆಲಿಕ್ಸ್, ಇಂದು ಸಂಜೆ 4 ಗಂಟೆಗೆ ಚಾಕು ಮತ್ತು ತಲ್ವಾರ್ ನಿಂದ ಫಣೀಂದ್ರ ಮತ್ತು ವಿನು ಕುಮಾರ್ ಮೇಲೆ ದಾಳಿ ಮಾಡಿ, ಕೊಲೆಗೈದಿದ್ದ. ಒಟ್ಟು ಮೂವರು ಜತೆಯಾಗಿ ಈ ಕೃತ್ಯವೆಸಗಿದ್ದು, ಒಂದು ಕೊಲೆ ತಳಮಹಡಿಯಲ್ಲಿ ಇನ್ನೊಂದು ಕೊಲೆ ಮೂರನೇ ಮಹಡಿಯಲ್ಲಿ ನಡೆದಿದೆ. ಪ್ರಕರಣದ ಬಳಿಕ ಆರೋಪಿಗಳು ಕಾಂಪೌಂಡ್ ಹಾರಿ ಪರಾರಿಯಾಗಿದ್ದಾರೆ. ಸದ್ಯ ಅಮೃತಳ್ಳಿ ಪೊಲೀಸರು ಕೊಲೆ ಕೇಸನ್ನು ವಿಚಾರಣೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!