ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಉತ್ತರ ಪ್ರದೇಶದ ಔರೈಯಾ ನಲ್ಲಿ ಅಪರೂಪದ ಘಟನೆೊಂದು ಬೆಳಕಿಗೆ ಬಂದಿದೆ. ಸಾಮಾನ್ಯವಾಗಿ ಮರಣಾನಂತರ ನಡೆಯುವ ‘ಹದಿಮೂರನೇ ದಿನದ’ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು, ವೃದ್ಧ ವ್ಯಕ್ತಿಯೊಬ್ಬರು ತಮ್ಮ ಜೀವಿತದಲ್ಲಿಯೇ ಆಯೋಜಿಸಿ 2,000ಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯ ಲಕ್ಷ್ಮಣಪುರ ಗ್ರಾಮದ ನಿವಾಸಿಯಾದ 65 ವರ್ಷದ ರಾಕೇಶ್ ಯಾದವ್ ಈ ವಿಶಿಷ್ಟ ಕಾರ್ಯಕ್ರಮದ ಆಯೋಜಕರಾಗಿದ್ದಾರೆ. ಅವಿವಾಹಿತರಾದ ಅವರು ತಮ್ಮ ಬಳಿಕ ಅಂತ್ಯಕ್ರಿಯೆ ಹಾಗೂ ಧಾರ್ಮಿಕ ವಿಧಿಗಳನ್ನು ನೆರವೇರಿಸುವವರು ಯಾರೂ ಇಲ್ಲ ಎಂಬ ಆತಂಕದಿಂದಲೇ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಮಾರ್ಚ್ 30ರಂದು ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾದ ಈ ‘ಜಿಂದಾ ಭಂಡಾರ’ (ಜೀವಂತ ಔತಣ) ಕಾರ್ಯಕ್ರಮದಲ್ಲಿ ಸುಮಾರು 2,000 ಅತಿಥಿಗಳಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ವಿಶೇಷವೆಂದರೆ, ತಮ್ಮದೇ ಛಾಯಾಚಿತ್ರ ಹೊಂದಿದ ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಿ ಗ್ರಾಮಸ್ಥರಿಗೆ ಹಂಚಲಾಗಿದೆ. ಈ ಆಹ್ವಾನ ಪತ್ರಿಕೆಗಳೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಕಾರ್ಯಕ್ರಮದ ಸಿದ್ಧತೆಗಳು ಹಲವು ದಿನಗಳ ಮುಂಚಿತವಾಗಿಯೇ ಆರಂಭವಾಗಿದ್ದು, ಗ್ರಾಮಸ್ಥರು ಸೇರಿ ಭಾರಿ ಪ್ರಮಾಣದಲ್ಲಿ ಆಹಾರ ತಯಾರಿಕೆಯಲ್ಲಿ ತೊಡಗಿಕೊಂಡಿದ್ದರು. ಮಹಿಳೆಯರು ಮತ್ತು ಯುವಕರು ತರಕಾರಿ ಸೇರಿದಂತೆ ವಿವಿಧ ಭಕ್ಷ್ಯಗಳನ್ನು ಸಿದ್ಧಪಡಿಸುವಲ್ಲಿ ನಿರತರಾಗಿದ್ದರು.ಈ ಘಟನೆ ಗ್ರಾಮದಲ್ಲಿ ವಿಭಿನ್ನ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕೆಲವರು ಇದನ್ನು ವೃದ್ಧರ ಒಂಟಿತನದ ಅಭಿವ್ಯಕ್ತಿ ಎಂದು ಕಂಡರೆ, ಇನ್ನೂ ಕೆಲವರು ಅವರ ಧೈರ್ಯ ಮತ್ತು ಭಾವನಾತ್ಮಕ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಜೀವಂತವಾಗಿಯೇ ‘ಹದಿಮೂರನೇ ದಿನ’ ಆಚರಿಸಿದ ಈ ಘಟನೆ ಸಾಮಾಜಿಕವಾಗಿ ಚರ್ಚೆಗೆ ಕಾರಣವಾಗಿದ್ದು, ಮಾನವ ಸಂಬಂಧಗಳ ಮಹತ್ವವನ್ನು ಮತ್ತೊಮ್ಮೆ ಮನದಟ್ಟು ಮಾಡಿಸಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್