Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಶಿವಕುಮಾರ್ ಸತ್ಯ ಹರಿಶ್ಚಂದ್ರ ಎಂದು ಸಾಬೀತುಪಡಿಸಲು ಅವಕಾಶವಿದೆ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

Facebook
Twitter
Telegram
WhatsApp

ಬೆಂಗಳೂರು: ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡ ನಿರ್ಧಾರ ಸಂಪೂರ್ಣ ಕಾನೂನುಬಾಹಿರವಾಗಿದೆ ಎಂದು ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಶಿವಕುಮಾರ್ ಅವರು ಸತ್ಯ ಹರಿಶ್ಚಂದ್ರ ಎಂದು ಸಾಬೀತು ಪಡಿಸಲು ಇನ್ನು ಅವಕಾಶವಿದೆ ಎಂದು ತಿಳಿಸಿದ್ದಾರೆ.

 

ಈ ಬಗ್ಗೆ ಮಾತನಾಡಿದ ವಿಜಯೇಂದ್ರ ಅವರು, ಜನತೆಯ ಮುಂದೆ‌ ನೀವೂ ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ಸಾಬೀತುಪಡಿಸಿ ತೋರಿಸಿ. ಆದಾಯ ತೆರಿಗೆ ದಾಳಿಯಾದಾಗ ಬೆಂಗಳೂರು ಮತ್ತು ವಿವಿದೆಡೆ ಲಭಿಸಿದ ಹಣದ ವಿಷಯ ಎಲ್ಲರಿಗೂ ಗೊತ್ತು. ಇಡಿ ಕೂಡ ಹಲವು ವರ್ಷಗಳ ತನಿಖೆ ನಡೆಸಿದೆ. ಕ್ಯಾಬಿನೆಟ್ ನಿರ್ಧಾರ ಸಂಪೂರ್ಣವಾಗಿ ತಪ್ಪು ನಿರ್ಧಾರವಾಗಿದೆ ಎಂದಿದ್ದಾರೆ.

 

ಕಾಂಗ್ರೆಸ್ ಪಕ್ಷದ ನಿರ್ಧಾರ ದುರದೃಷ್ಟಕರ ಹಾಗೂ ಬಿಜೆಪಿ ಈ ನಿರ್ಧಾರವನ್ನು ಖಂಡಿಸುತ್ತದೆ. ಇದು ಕಾನೂನಿನ ವಿರುದ್ಧ ತೆಗೆದುಕೊಂಡಿರುವ ನಿರ್ಧಾರವಾಗಿದೆ. ಡಿಕೆ ಶಿವಕುಮಾರ್ ಯಾಕಾಗಿ ತನಿಖೆಗೆ ಭಯ ಪಡುತ್ತಾರೆ..? ಅವರಿಗೆ ಕಾನೂನಿನ ಮೇಲೆ ವಿಶ್ವಾಸ ಇಲ್ಲವೆ..? ತಾವು ಹಲವು ವರ್ಷಗಳಿಂದ ನಿರಂತರವಾಗಿ ಕಾನೂನು ಹೋರಾಟ ಮಾಡುತ್ತ ಬರುತ್ತಿದ್ದೀರಿ. ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಜವಾಬ್ದಾರಿಯ ಸ್ಥಾನದಲ್ಲಿರುವ ಡಿ.ಕೆ.ಶಿವಕುಮಾರ್ ಅವರು ಪ್ರಾಮಾಣಿಕವಾಗಿ ಇದ್ದರೆ ಕ್ಯಾಬಿನೆಟ್ ಕೈಗೊಳ್ಳುವ ಈ ತೀರ್ಮಾವನ್ನು ವಿರೋಧಿಸಬೇಕಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!