ಆನಂದ್ ಸಿಂಗ್ ಗೆ ಕೊಪ್ಪಳ ಉಸ್ತುವಾರಿ : ರೊಚ್ಚುಗೆದ್ದ ಬೆಂಬಲಿಗರಿಂದ ಪ್ರತಿಭಟನೆ..!

suddionenews
1 Min Read

ವಿಜಯನಗರ: ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಎಲ್ಲಾ ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನ ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಮುಂಚೆ ಇದ್ದ ಜಿಲ್ಲೆಗಳನ್ನ ಬಿಟ್ಟು ಬೇರೆ ಜಿಲ್ಲೆಗಳನ್ನ ನೀಡಿದ್ದಾರೆ. ಇದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಪರಿಣಾಮ ಸಚಿವ ಆನಂದ್ ಸಿಂಗ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.

ಉಸ್ತುವಾರಿ ನೇಮಿಸಿ ಒಂದು ದಿನ ಕೂಡ ಕಳೆದಿಲ್ಲ. ಈಗಲೇ ಅಸಮಾಧಾನ ಹೊಗೆಯಾಡುತ್ತಿದೆ. ಬಳ್ಳಾರಿ ಮತ್ತು ವಿಜಯನಗರದ ಉಸ್ತುವಾರಿಯಾಗಿದ್ದ ಆನಂದ್ ಸಿಂಗ್ ಅವರನ್ನ ಇದೀಗ ಕೊಪ್ಪಳ ಜಿಲ್ಲೆಗೆ ಉಸ್ತುವಾರಿಯನ್ನಾಗಿ ನೇಮಿಸಿರುವುದು ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೀಗಾಗಿ ಹೊಸಪೇಟೆಯಲ್ಲಿರುವ ಪುನೀತ್ ರಾಜ್‍ಕುಮಾರ್ ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಇದೇ ವೇಳೆ ವಿಜಯನಗರಕ್ಕೆ ಆನಂದ್ ಸಿಂಗ್ ಅವರನ್ನೆ ಉಸ್ತುವಾರಿಯನ್ನಾಗಿ ನೇಮಕ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *